ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…