ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನವೇ ಹುಲ್ಲು | ಕಳೆನಾಶಕ, ಕ್ರಿಮಿನಾಶಕದಿಂದ ಭೂಮಿಯ ಭೋಜನ ಹಾಳು ಮಾಡದಿರೋಣ.. |

November 18, 2023
12:46 PM
ಭೂಮಿಯ ಆರೋಗ್ಯ ಕಾಪಾಡುವ ಕಡೆಗೆ ಗಮನ ಹರಿಸೋಣ...

ಭೂಮಿ ತನ್ನ ಸವಕಳಿಯ(Depreciation) ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ 1 ಇಂಚು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು.

ನಿರಂತರ ಕಳೆನಾಶಕ ಸಿಂಪಡಣೆ ಮಾಡುವುದರಿಂದ ಭೂಮಿಯ ಮೇಲಿನ ಗಿಡಗಳು ನಾಶವಾಗಿ ಪರ್ಯಾಯವಾಗಿ ಪಾಚಿ ಮಾಡದರಿಯ ಗಿಡ ಬೆಳೆಯುತ್ತದೆ. ಇದರಿಂದ ಭೂಮಿಯ ಆರೋಗ್ಯ ಹದಗೆಡುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ಭೂಮಿಯ ಮೇಲ್ಮೈ ಮಣ್ಣು ನೀರಿನಿಂದ ಕೊಚ್ಚಿ ಹೋಗುತ್ತದೆ. ಇದರಿಂದ ಭೂಮಿಯೂ ಸಾರ ರಹಿತವಾಗುತ್ತದೆ. ಗಿಡಗಳಿಗೆ, ನಮ್ಮ ಬೆಳೆಗಳಿಗೂ ಹೆಚ್ಚಿನ ರೋಗ ಬಾಧೆ ಕಾಡುತ್ತದೆ. ಇದಕ್ಕಾಗಿಯೇ ಭೂಮಿಯ ಆರೋಗ್ಯ ಕಾಪಾಡೋಣ.  ಇದಕ್ಕಾಗಿ ವಾದಗಳಿಗೆ ಇಳಿಯದೆ ನಮ್ಮ ಜೊತೆಗೆ ಭೂಮಿ, ಗಿಡ, ಈ ನಾಡು ಉಳಿಯುವ ಕಡೆಗೆ ಗಮನಹರಿಸೋಣ…

Even if you drink the same soil, the same water, there are hundreds of varieties of plants and the smell and taste of the plant are hundreds. Just as nutrition is essential to our body, so is grass to the earth’s nutritional system. If we poison and destroy that grass, isn’t it like destroying the nutrients that the earth needs naturally? It may take at least a thousand years for an inch of organic carbon-rich topsoil to form, if loose organic material falls and rots.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror