Advertisement
MIRROR FOCUS

ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನವೇ ಹುಲ್ಲು | ಕಳೆನಾಶಕ, ಕ್ರಿಮಿನಾಶಕದಿಂದ ಭೂಮಿಯ ಭೋಜನ ಹಾಳು ಮಾಡದಿರೋಣ.. |

Share

ಭೂಮಿ ತನ್ನ ಸವಕಳಿಯ(Depreciation) ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ 1 ಇಂಚು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು.

ನಿರಂತರ ಕಳೆನಾಶಕ ಸಿಂಪಡಣೆ ಮಾಡುವುದರಿಂದ ಭೂಮಿಯ ಮೇಲಿನ ಗಿಡಗಳು ನಾಶವಾಗಿ ಪರ್ಯಾಯವಾಗಿ ಪಾಚಿ ಮಾಡದರಿಯ ಗಿಡ ಬೆಳೆಯುತ್ತದೆ. ಇದರಿಂದ ಭೂಮಿಯ ಆರೋಗ್ಯ ಹದಗೆಡುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ಭೂಮಿಯ ಮೇಲ್ಮೈ ಮಣ್ಣು ನೀರಿನಿಂದ ಕೊಚ್ಚಿ ಹೋಗುತ್ತದೆ. ಇದರಿಂದ ಭೂಮಿಯೂ ಸಾರ ರಹಿತವಾಗುತ್ತದೆ. ಗಿಡಗಳಿಗೆ, ನಮ್ಮ ಬೆಳೆಗಳಿಗೂ ಹೆಚ್ಚಿನ ರೋಗ ಬಾಧೆ ಕಾಡುತ್ತದೆ. ಇದಕ್ಕಾಗಿಯೇ ಭೂಮಿಯ ಆರೋಗ್ಯ ಕಾಪಾಡೋಣ.  ಇದಕ್ಕಾಗಿ ವಾದಗಳಿಗೆ ಇಳಿಯದೆ ನಮ್ಮ ಜೊತೆಗೆ ಭೂಮಿ, ಗಿಡ, ಈ ನಾಡು ಉಳಿಯುವ ಕಡೆಗೆ ಗಮನಹರಿಸೋಣ…

Even if you drink the same soil, the same water, there are hundreds of varieties of plants and the smell and taste of the plant are hundreds. Just as nutrition is essential to our body, so is grass to the earth’s nutritional system. If we poison and destroy that grass, isn’t it like destroying the nutrients that the earth needs naturally? It may take at least a thousand years for an inch of organic carbon-rich topsoil to form, if loose organic material falls and rots.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

6 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

11 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

16 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago