ಕಾದಿದೆ ಗಂಡಾಂತರ |ವಿಜ್ಞಾನಿಗಳ ಎಚ್ಚರಿಕೆ! | 146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ…..!|

March 1, 2023
5:42 PM

ಜಾಗತಿಕ ತಾಪಮಾನ ಹೆಚ್ಚಳ ಹಲವು ಅವಾಂತರಗಳಿಗೆ ಕಾರಣವಾಗಿದೆ. ಇದರ ಮಧ್ಯೆಯೇ ಅಮೆರಿಕಾದ ಪ್ರಿನ್ಸ್ಟನ್ ವಿವಿ ವಿಜ್ಞಾನಿಗಳು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರಣಿ ಚಂಡಮಾರುತಗಳು ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ. ತಾಪಮಾನದಲ್ಲಿನ ಹೆಚ್ಚಳ ಹಾಗೂ ಸಮುದ್ರದ ನೀರಿನ ಮಟ್ಟ ಹೆಚ್ಚಳ ಸಂಯೋಜನೆಗೊಂಡು ಭೀಕರ ಚಂಡಮಾರುತಕ್ಕೆ ಹಾದಿ ಮಾಡಿಕೊಡಲಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ:

Advertisement

ದೇಶದಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಬಾರಿ ಸರಾಸರಿ 29.54 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, 146 ವರ್ಷಗಳಲ್ಲೇ ಇದು ಗರಿಷ್ಠವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 1877ರ ಫೆಬ್ರವರಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿತ್ತು. 1901ರಲ್ಲೂ ತಾಪಮಾನ ಹೆಚ್ಚಾಗಿತ್ತು. ಫೆಬ್ರವರಿಯಲ್ಲಿನ ತಾಪಮಾನ ಏರಿಕೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಬಿಸಿ ಏರಿಕೆ ಬಗ್ಗೆ ಸೂಚನೆ ಕೊಡುತ್ತಿದೆ. ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರೀ ಅಲರ್ಟ್…

Advertisement

ಎಲ್ಲರೂ ಜಾಗ್ರತೆಯಿಂದ ಇರಿ! ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಕೆಲ ಮಾರ್ಗಸೂಚಿ ರಿಲೀಸ್ ಮಾಡಿದೆ. ಮನೆಯಲ್ಲೇ ತಯಾರಿಸಿದ ನಿಂಬೆ ಪಾನಕ, ಮಜ್ಜಿಗೆ, ನೀರು ಕುಡಿಯುತ್ತಿರಬೇಕು. ಹೊರ ಹೋಗುವಾಗ ಸಡಿಲವಾದ ಹತ್ತಿ ಬಟ್ಟೆ ಧರಿಸಿ. ಛತ್ರಿ ಅಥವಾ ಕ್ಯಾಪ್ ಬಳಸಿ.

ಸಣ್ಣ ಮಕ್ಕಳು, ಗರ್ಭಿಣಿಯರು, ಹಿರಿಯ ನಾಗರಿಕರು ಬಿಸಿಲಿನಲ್ಲಿ ಓಡಾಡಬೇಡಿ. ಬಿಸಿಲಿನಲ್ಲಿ ವಾಹನ ನಿಲ್ಲಿಸಿದಾಗ ಮಕ್ಕಳನ್ನು ವಾಹನದೊಳಗೆ ಬಿಡಬೇಡಿ.ಅನಾರೋಗ್ಯ ಉಂಟಾದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror