ಸುದ್ದಿಗಳು

ಕಾದಿದೆ ಗಂಡಾಂತರ |ವಿಜ್ಞಾನಿಗಳ ಎಚ್ಚರಿಕೆ! | 146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ…..!|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಾಗತಿಕ ತಾಪಮಾನ ಹೆಚ್ಚಳ ಹಲವು ಅವಾಂತರಗಳಿಗೆ ಕಾರಣವಾಗಿದೆ. ಇದರ ಮಧ್ಯೆಯೇ ಅಮೆರಿಕಾದ ಪ್ರಿನ್ಸ್ಟನ್ ವಿವಿ ವಿಜ್ಞಾನಿಗಳು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರಣಿ ಚಂಡಮಾರುತಗಳು ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ. ತಾಪಮಾನದಲ್ಲಿನ ಹೆಚ್ಚಳ ಹಾಗೂ ಸಮುದ್ರದ ನೀರಿನ ಮಟ್ಟ ಹೆಚ್ಚಳ ಸಂಯೋಜನೆಗೊಂಡು ಭೀಕರ ಚಂಡಮಾರುತಕ್ಕೆ ಹಾದಿ ಮಾಡಿಕೊಡಲಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

Advertisement
Advertisement

146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ:

ದೇಶದಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಬಾರಿ ಸರಾಸರಿ 29.54 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, 146 ವರ್ಷಗಳಲ್ಲೇ ಇದು ಗರಿಷ್ಠವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 1877ರ ಫೆಬ್ರವರಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿತ್ತು. 1901ರಲ್ಲೂ ತಾಪಮಾನ ಹೆಚ್ಚಾಗಿತ್ತು. ಫೆಬ್ರವರಿಯಲ್ಲಿನ ತಾಪಮಾನ ಏರಿಕೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಬಿಸಿ ಏರಿಕೆ ಬಗ್ಗೆ ಸೂಚನೆ ಕೊಡುತ್ತಿದೆ. ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರೀ ಅಲರ್ಟ್…

ಎಲ್ಲರೂ ಜಾಗ್ರತೆಯಿಂದ ಇರಿ! ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಕೆಲ ಮಾರ್ಗಸೂಚಿ ರಿಲೀಸ್ ಮಾಡಿದೆ. ಮನೆಯಲ್ಲೇ ತಯಾರಿಸಿದ ನಿಂಬೆ ಪಾನಕ, ಮಜ್ಜಿಗೆ, ನೀರು ಕುಡಿಯುತ್ತಿರಬೇಕು. ಹೊರ ಹೋಗುವಾಗ ಸಡಿಲವಾದ ಹತ್ತಿ ಬಟ್ಟೆ ಧರಿಸಿ. ಛತ್ರಿ ಅಥವಾ ಕ್ಯಾಪ್ ಬಳಸಿ.

Advertisement

ಸಣ್ಣ ಮಕ್ಕಳು, ಗರ್ಭಿಣಿಯರು, ಹಿರಿಯ ನಾಗರಿಕರು ಬಿಸಿಲಿನಲ್ಲಿ ಓಡಾಡಬೇಡಿ. ಬಿಸಿಲಿನಲ್ಲಿ ವಾಹನ ನಿಲ್ಲಿಸಿದಾಗ ಮಕ್ಕಳನ್ನು ವಾಹನದೊಳಗೆ ಬಿಡಬೇಡಿ.ಅನಾರೋಗ್ಯ ಉಂಟಾದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

4 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

8 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

8 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

13 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

16 hours ago