ಜಾಗತಿಕ ತಾಪಮಾನ ಹೆಚ್ಚಳ ಹಲವು ಅವಾಂತರಗಳಿಗೆ ಕಾರಣವಾಗಿದೆ. ಇದರ ಮಧ್ಯೆಯೇ ಅಮೆರಿಕಾದ ಪ್ರಿನ್ಸ್ಟನ್ ವಿವಿ ವಿಜ್ಞಾನಿಗಳು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರಣಿ ಚಂಡಮಾರುತಗಳು ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ. ತಾಪಮಾನದಲ್ಲಿನ ಹೆಚ್ಚಳ ಹಾಗೂ ಸಮುದ್ರದ ನೀರಿನ ಮಟ್ಟ ಹೆಚ್ಚಳ ಸಂಯೋಜನೆಗೊಂಡು ಭೀಕರ ಚಂಡಮಾರುತಕ್ಕೆ ಹಾದಿ ಮಾಡಿಕೊಡಲಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.
146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ:
ದೇಶದಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಬಾರಿ ಸರಾಸರಿ 29.54 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, 146 ವರ್ಷಗಳಲ್ಲೇ ಇದು ಗರಿಷ್ಠವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 1877ರ ಫೆಬ್ರವರಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿತ್ತು. 1901ರಲ್ಲೂ ತಾಪಮಾನ ಹೆಚ್ಚಾಗಿತ್ತು. ಫೆಬ್ರವರಿಯಲ್ಲಿನ ತಾಪಮಾನ ಏರಿಕೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಬಿಸಿ ಏರಿಕೆ ಬಗ್ಗೆ ಸೂಚನೆ ಕೊಡುತ್ತಿದೆ. ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರೀ ಅಲರ್ಟ್…
ಎಲ್ಲರೂ ಜಾಗ್ರತೆಯಿಂದ ಇರಿ! ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಕೆಲ ಮಾರ್ಗಸೂಚಿ ರಿಲೀಸ್ ಮಾಡಿದೆ. ಮನೆಯಲ್ಲೇ ತಯಾರಿಸಿದ ನಿಂಬೆ ಪಾನಕ, ಮಜ್ಜಿಗೆ, ನೀರು ಕುಡಿಯುತ್ತಿರಬೇಕು. ಹೊರ ಹೋಗುವಾಗ ಸಡಿಲವಾದ ಹತ್ತಿ ಬಟ್ಟೆ ಧರಿಸಿ. ಛತ್ರಿ ಅಥವಾ ಕ್ಯಾಪ್ ಬಳಸಿ.
ಸಣ್ಣ ಮಕ್ಕಳು, ಗರ್ಭಿಣಿಯರು, ಹಿರಿಯ ನಾಗರಿಕರು ಬಿಸಿಲಿನಲ್ಲಿ ಓಡಾಡಬೇಡಿ. ಬಿಸಿಲಿನಲ್ಲಿ ವಾಹನ ನಿಲ್ಲಿಸಿದಾಗ ಮಕ್ಕಳನ್ನು ವಾಹನದೊಳಗೆ ಬಿಡಬೇಡಿ.ಅನಾರೋಗ್ಯ ಉಂಟಾದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…