Advertisement
ಸುದ್ದಿಗಳು

ಕೃಷಿ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ | ಬರಲಿದೆ ನ್ಯಾನೋ ಲಿಕ್ವಿಡ್ ಗೊಬ್ಬರ…!

Share

ಇನ್ನು ಮುಂದೆ ರೈತರಿಗೆ ಗಾಡಿ ಮಾಡಿಕೊಂಡು ಪೇಟೆಗೆ ಹೋಗಿ ಚೀಲಗಟ್ಟಲೆ ಯೂರಿಯಾ, ಡಿಎಪಿ ತರುವ ತಾಪತ್ರೆಯ ಇಲ್ಲ.. ಹಾಗೆ ಕೈ ಬೀಸಿಕೊಂಡು ಹೋಗಿ ಒಂದು ಬಾಟಲ್ ಹಿಡಿದುಕೊಂಡು ಬಂದರೆ ಸಾಕು. ದುಡ್ಡು ಉಳಿತಾಯ, ಸಾಗಾಟ, ಸ್ಥಳ, ಸಮಯ ಎಲ್ಲವೂ ಉಳಿತಾಯ.

Advertisement
Advertisement

ಹೌದು….. ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರದಿಂದ ರೈತರಿಗೆ ಅನುಕೂಲವಾಗಲಿದೆ. ಒಂದು ಬ್ಯಾಗ್ ಡಿಎಪಿ ರೂ.1350 ಆಗಿದ್ದರೆ ಅದಕ್ಕೆ ಸಮಾನವಾದ 500 ಎಂಎಲ್ ಲಿಕ್ವಿಡ್ ಡಿಎಪಿ ರೂ.600ಕ್ಕೆ ಲಭ್ಯವಾಗಲಿದೆ. ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇತ್ತೀಚಿನ ದಿನಗಳಲ್ಲಿ ರಸಗೊಬ್ಬರಗಳ ಬಳಕೆ ಹೆಚ್ಚಾಗಿರುವುದರಿಂದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೊಬ್ಬರ ಚೀಲಗಳಿಗಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ.

ಆ ಹಿನ್ನೆಲೆಯಲ್ಲಿ ನ್ಯಾನೋ ಯೂರಿಯಾವನ್ನು 2021 ರಲ್ಲಿ ತರಲು ಕೇಂದ್ರವು ಹಲವಾರು ಪ್ರಯತ್ನಗಳನ್ನು ಮಾಡಿತ್ತು. ಇಫ್ಕೋ ತಯಾರಿಸಿದ ಲಿಕ್ವಿಡ್ ನ್ಯಾನೊ-ಯೂರಿಯಾವನ್ನು ಮಾರುಕಟ್ಟೆಯಲ್ಲಿ ಪರಿಚಯಿಸಲು ಅನುಮೋದನೆ ನೀಡಲಾಗಿತ್ತು.

ಅದರ ನಂತರ, ಈ ನ್ಯಾನೊ ಯೂರಿಯಾವನ್ನು ಮಾರುಕಟ್ಟೆಗೆ ತರಲಾಯಿತು. ಅಲ್ಲದೆ ಮುಂಬರುವ ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರಸಗೊಬ್ಬರ ಬಳಕೆಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿಯೂ ನ್ಯಾನೊ ಲಿಕ್ವಿಡ್ ಡಿಎಪಿ ತರಲು ಕೇಂದ್ರ ಒಪ್ಪಿಗೆ ನೀಡಿದೆ.

ಈ ವಿಷಯವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ ಸಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ. ನ್ಯಾನೋ ಯೂರಿಯಾ ನಂತರ ನ್ಯಾನೋ ಡಿಎಪಿಗೂ ಅನುಮೋದನೆ ನೀಡಲಾಗಿದೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಮಾಂಡವೀಯ ಹೇಳಿದರು.

ಒಂದು ಡಿಎಪಿ ಚೀಲದ ಬೆಲೆ 1350 ರೂ. ಆದರೆ ದ್ರವರೂಪದಲ್ಲಿ ಬರುತ್ತಿರುವ 500 ಎಂಎಲ್ ಡಿಎಪಿಯನ್ನು 600 ರೂ.ಗೆ ನಿಗದಿಪಡಿಸಲಾಗಿದೆ. 500 ಮಿಲಿ ದ್ರವ ಡಿಎಪಿ ಒಂದು ಚೀಲ ಡಿಎಪಿಗೆ ಸಮ. ನ್ಯಾನೋ ಯೂರಿಯಾ ತಯಾರಕರಾದ IFFCO ಈ ನ್ಯಾನೋ ಲಿಕ್ವಿಡ್ DAP ಅನ್ನು ತಯಾರಿಸುತ್ತದೆ. ದೇಶದಲ್ಲಿ ಯೂರಿಯಾ ನಂತರ ಹೆಚ್ಚು ಬಳಕೆಯಾಗುವ ಗೊಬ್ಬರ ಡಿಎಪಿ.

ಸರ್ಕಾರ ನ್ಯಾನೋ ಯೂರಿಯಾಕ್ಕೆ ಸಬ್ಸಿಡಿ ನೀಡುತ್ತಿಲ್ಲ. ನ್ಯಾನೊ ಲಿಕ್ವಿಡ್ ಯೂರಿಯಾ ಪ್ರತಿ ಬಾಟಲಿಗೆ 240 ರೂ. ಅದೇ ಯೂರಿಯಾ ಚೀಲ 280 ರೂ. ಅಲ್ಲದೆ, ಒಂದು ಬ್ಯಾಗ್ ಡಿಎಪಿ ರೂ.1350 ಆಗಿದ್ದರೆ ಅದಕ್ಕೆ ಸಮಾನವಾದ 500 ಎಂಎಲ್ ಲಿಕ್ವಿಡ್ ಡಿಎಪಿ ರೂ.600ಕ್ಕೆ ಲಭ್ಯವಾಗಲಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರದಿಂದ ರೈತರಿಗೆ ಅನುಕೂಲವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago