ಕಲೆ-ಸಂಸ್ಕೃತಿ

ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಮೇರಿಕಾ ಕನ್ನಡ ಕೂಟಗಳ ಆಗರ (ಅಕ್ಕ)ʼ 2024 ರ ಸಮ್ಮೇಳನಕ್ಕೆ(AKKA conference 2024) ಅದ್ಧೂರಿ ಸಿದ್ದತೆ ನಡೆಸಲಾಗಿದೆ. ಅಮೇರಿಕಾದ(America) 50 ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು(Kannada sangha) ಒಟ್ಟಾಗಿ ಸೇರಿ ಪ್ರತೀ ಎರಡು ವರ್ಷಗಳಿಗೊಮ್ಮೆ ಈ ಸಮ್ಮೇಳನವನ್ನು ಆಯೋಜಿಸುತ್ತವೆ. ಕೋವಿಡ್ ಕಾರಣದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಮುಂದೂಡಲಾಗಿದ್ದ ಈ ಸಮ್ಮೇಳನ ಈ ಬಾರಿ ಅಮೇರಿಕಾದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ(Richmond city) ಇದೇ ಆಗಸ್ಟ್ 30, 31 ಮತ್ತು ಸೆಪ್ಟಂಬರ್ 1, 2024 ರಂದು ನಡೆಯಲಿದೆ.

Advertisement

ಈ ಸಮ್ಮೇಳನಕ್ಕಾಗಿ 6 ರಿಂದ 8 ಸಾವಿರ ಕನ್ನಡಿಗರು ನೊಂದಾಯಿಸಿಕೊಂಡಿದ್ದು, ಮೂರು ದಿನಗಳ ಕಾಲ ಕನ್ನಡ ಡಿಂಡಿಮ ರಿಚ್ಮಂಡ್ ನಗರದಲ್ಲಿ ಪ್ರತಿಧ್ವನಿಸಲಿದೆ. ಕಾರ್ಯಕ್ರಮದ ಆಕರ್ಷಣೆಗಳಾಗಿ ಜಾನಪದ ಗೀತಗಾಯನ, ನಾಟಕ, ನೃತ್ಯ, ಫ್ಯಾಷನ್ ಷೋ, ಆರ್ಟ್ ಫೆಸ್ಟಿವಲ್, ಕ್ರೀಡಾ ಚಟುವಟಿಕೆಗಳು, ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಫಿಲ್ಮ್ ಫೆಸ್ಟಿವಲ್, ಬುಸಿನೆಸ್ ಫೋರಂ, ಅಪ್ಪು ನೈಟ್, ವಿಧ್ಯಾಭೂಷಣರ ಸಂಗೀತ, ನವೀನ್ ಸಜ್ಜು ಮತ್ತು ತಂಡದವರಿಂದ ಜಾನಪದ ಗೀತೆ, ಗುರುಕಿರಣ್ ನೈಟ್ ಹಾಗು ಕರ್ನಾಟಕದ ಕಲಾವಿದರಿಂದ ವಿವಿಧ ಜಾನಪದ ಕಾರ್ಯಕ್ರಮಗಳು ನಡೆಯಲಿವೆ.

ಕರ್ನಾಟಕದಿಂದ ವಿಶೇಷ ಆಹ್ವಾನಿತರಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಶಿವರಾಜ್ ತಂಗಡಗಿ, ಕೃಷಿ ಸಚಿವರಾದ ಶ್ರೀ ಚೆಲುವರಾಯಸ್ವಾಮಿ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ವರ್ಷದ ಸಮ್ಮೇಳನವು ಕನ್ನಡಿಗರಿಗೆ ಒಂದು ಸಂಭ್ರಮದ ಹಬ್ಬವಾಗಿದ್ದು, ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಅಮೇರಿಕಾದ ಕನ್ನಡಿಗರಿಗೆ ಮತ್ತೊಮ್ಮೆ ಸವಿಯುವಂತಹ ಒಂದು ಅಪೂರ್ವ ಅವಕಾಶವಾಗಿದೆ.
– ರವಿ ಬೋರೆಗೌಡ, ಅಧ್ಯಕ್ಷರು, ಅಕ್ಕ, ಅಮೇರಿಕಾ.
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

7 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

7 hours ago

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…

9 hours ago

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …

9 hours ago

ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…

10 hours ago