Advertisement
ಕಲೆ-ಸಂಸ್ಕೃತಿ

ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ

Share

ಅಮೇರಿಕಾ ಕನ್ನಡ ಕೂಟಗಳ ಆಗರ (ಅಕ್ಕ)ʼ 2024 ರ ಸಮ್ಮೇಳನಕ್ಕೆ(AKKA conference 2024) ಅದ್ಧೂರಿ ಸಿದ್ದತೆ ನಡೆಸಲಾಗಿದೆ. ಅಮೇರಿಕಾದ(America) 50 ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು(Kannada sangha) ಒಟ್ಟಾಗಿ ಸೇರಿ ಪ್ರತೀ ಎರಡು ವರ್ಷಗಳಿಗೊಮ್ಮೆ ಈ ಸಮ್ಮೇಳನವನ್ನು ಆಯೋಜಿಸುತ್ತವೆ. ಕೋವಿಡ್ ಕಾರಣದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಮುಂದೂಡಲಾಗಿದ್ದ ಈ ಸಮ್ಮೇಳನ ಈ ಬಾರಿ ಅಮೇರಿಕಾದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ(Richmond city) ಇದೇ ಆಗಸ್ಟ್ 30, 31 ಮತ್ತು ಸೆಪ್ಟಂಬರ್ 1, 2024 ರಂದು ನಡೆಯಲಿದೆ.

ಈ ಸಮ್ಮೇಳನಕ್ಕಾಗಿ 6 ರಿಂದ 8 ಸಾವಿರ ಕನ್ನಡಿಗರು ನೊಂದಾಯಿಸಿಕೊಂಡಿದ್ದು, ಮೂರು ದಿನಗಳ ಕಾಲ ಕನ್ನಡ ಡಿಂಡಿಮ ರಿಚ್ಮಂಡ್ ನಗರದಲ್ಲಿ ಪ್ರತಿಧ್ವನಿಸಲಿದೆ. ಕಾರ್ಯಕ್ರಮದ ಆಕರ್ಷಣೆಗಳಾಗಿ ಜಾನಪದ ಗೀತಗಾಯನ, ನಾಟಕ, ನೃತ್ಯ, ಫ್ಯಾಷನ್ ಷೋ, ಆರ್ಟ್ ಫೆಸ್ಟಿವಲ್, ಕ್ರೀಡಾ ಚಟುವಟಿಕೆಗಳು, ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಫಿಲ್ಮ್ ಫೆಸ್ಟಿವಲ್, ಬುಸಿನೆಸ್ ಫೋರಂ, ಅಪ್ಪು ನೈಟ್, ವಿಧ್ಯಾಭೂಷಣರ ಸಂಗೀತ, ನವೀನ್ ಸಜ್ಜು ಮತ್ತು ತಂಡದವರಿಂದ ಜಾನಪದ ಗೀತೆ, ಗುರುಕಿರಣ್ ನೈಟ್ ಹಾಗು ಕರ್ನಾಟಕದ ಕಲಾವಿದರಿಂದ ವಿವಿಧ ಜಾನಪದ ಕಾರ್ಯಕ್ರಮಗಳು ನಡೆಯಲಿವೆ.

ಕರ್ನಾಟಕದಿಂದ ವಿಶೇಷ ಆಹ್ವಾನಿತರಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಶಿವರಾಜ್ ತಂಗಡಗಿ, ಕೃಷಿ ಸಚಿವರಾದ ಶ್ರೀ ಚೆಲುವರಾಯಸ್ವಾಮಿ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ವರ್ಷದ ಸಮ್ಮೇಳನವು ಕನ್ನಡಿಗರಿಗೆ ಒಂದು ಸಂಭ್ರಮದ ಹಬ್ಬವಾಗಿದ್ದು, ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಅಮೇರಿಕಾದ ಕನ್ನಡಿಗರಿಗೆ ಮತ್ತೊಮ್ಮೆ ಸವಿಯುವಂತಹ ಒಂದು ಅಪೂರ್ವ ಅವಕಾಶವಾಗಿದೆ.
– ರವಿ ಬೋರೆಗೌಡ, ಅಧ್ಯಕ್ಷರು, ಅಕ್ಕ, ಅಮೇರಿಕಾ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

59 minutes ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

1 hour ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

1 hour ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

2 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

2 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

2 hours ago