ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

November 25, 2020
1:57 PM
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.

Advertisement
Advertisement

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

Advertisement

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

Advertisement

 

Advertisement

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

Advertisement
(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..
May 18, 2024
12:36 PM
by: ವಿವೇಕಾನಂದ ಎಚ್‌ ಕೆ
ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |
May 17, 2024
11:12 AM
by: ದ ರೂರಲ್ ಮಿರರ್.ಕಾಂ
ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?
May 15, 2024
2:29 PM
by: ಮುರಲೀಕೃಷ್ಣ ಕೆ ಜಿ
ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ
May 15, 2024
11:34 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror