Advertisement
ಅನುಕ್ರಮ

ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

Share
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

 

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 hour ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

5 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

9 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago