Advertisement
ಅನುಕ್ರಮ

ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

Share
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.
Advertisement

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

 

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

2 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago