Advertisement
ಅನುಕ್ರಮ

ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

Share
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

Advertisement

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

Advertisement

 

Advertisement

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

Advertisement
(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

14 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

16 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

22 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago