Advertisement
ಅನುಕ್ರಮ

ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

Share
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

 

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

3 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

16 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago