Advertisement
ಅನುಕ್ರಮ

ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

Share
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

 

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

10 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

10 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

1 day ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago