ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಅತ್ಯಂತ ವಿಶೇಷವಾದಂತಹ ಹಸಿರು ಕಪ್ಪೆಗಳು ಪತ್ತೆಯಾಗಿವೆ. ಮಲೆನಾಡಿನಲ್ಲಿ ಮೇ-ಜೂನ್ ತಿಂಗಳಿನ ಮಳೆಗಾಲದಲ್ಲಿ ಮಾತ್ರ ಈ ಹಸಿರು ಕಪ್ಪೆಗಳು ಕಾಣಸಿಗುತ್ತವೆ. ಇದು ತೇವಾಂಶ ಅಧಿಕವಾಗಿರುವ ಮಳೆಕಾಡಿನಲ್ಲಿ ಕಾಣಸಿಗುವ ಕಪ್ಪೆಯ ಒಂದು ಪ್ರಭೇದವಾಗಿದೆ.
ಮಲೆನಾಡಿನಲ್ಲಿ ಪ್ರಾರಂಭದ ಮಳೆ ಬಿದ್ದಾಗ ಹಸಿರು ಕಪ್ಪೆಗಳ ಚಟುವಟಿಕೆಗಳು ನೀರು ಇರುವ ಜಾಗದಲ್ಲಿ ಶುರುವಾಗುತ್ತದೆ. ಉಳಿದ ದಿನಗಳಲ್ಲಿ ಕಾಣ ಸಿಗುವುದಿಲ್ಲ. ತಂಪಾದ ಜಾಗದಲ್ಲಿ ಹೋಗಿ ಮರ – ಗಿಡಗಳ ಸಂಧಿಯಲ್ಲಿ ವಾಸಿಸುತ್ತವೆ. ಮೊದಲ ಮಳೆ ಪ್ರಾರಂಭವಾಗುತ್ತಿದ್ದ ಹಾಗೆ ನೀರಿರುವ ಜಾಗದಲ್ಲಿ ಬಂದು ಸಂತಾನೋತ್ಪತ್ತಿಗಾಗಿ ಸೇರುವುದು ವಿಶೇಷವಾಗಿದೆ.
ಈ ಹಸಿರು ಕಪ್ಪೆಯ ಇನ್ನೊಂದು ವಿಶೇಷ ಏನೆಂದರೆ, ಮಿಲನ ಪ್ರಕ್ರಿಯೆ ಇಲ್ಲದೇ ಬಾಹ್ಯದಲ್ಲಿ ಸಂತಾನೋತ್ಪತ್ತಿ ಕ್ರಿಯೆ ಜರಗುವ ಅಪರೂಪದ ಸಂಗತಿ ಘಟಿಸುತ್ತದೆ. ನೀರು ಇರುವ ಜಾಗವನ್ನು ಆಯ್ಕೆ ಮಾಡಿ ತನ್ನ ಮೊಟ್ಟೆಯನ್ನ ನೊರೆ ರೂಪದಲ್ಲಿ ಗೂಡು ಇಡುತ್ತದೆ. ನಂತರದ ದಿನಗಳಲ್ಲಿ ಅದು ಕರಗಿ ನೀರಿಗೆ ಬಿದ್ದು ಅಲ್ಲಿ ಮರಿಗಳಾಗುವುದು ವಿಶೇಷ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…