Advertisement
ಸುದ್ದಿಗಳು

2030 ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಗುರಿ | ರಾಜ್ಯಸಭೆಯಲ್ಲಿ ಕೇಂದ್ರದ ಘೋಷಣೆ

Share

ದೇಶದಲ್ಲಿ ಹಸಿರು ಇಂಧನ ಹಾಗೂ ಮರುಬಳಕೆ ಇಂಧನ ವಲಯದಲ್ಲಿ ಅಭೂತಪೂರ್ವ ಕೆಲಸಗಳು ನಡೆಯುತ್ತಿವೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪುರಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಮರುಬಳಕೆ ಇಂಧನದ ವೈವಿಧ್ಯೀಕರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಶೇಕಡಾ 20ರಷ್ಟು ಜೈವಿಕ ಇಂಧನವನ್ನು ಪೆಟ್ರೋಲ್ ಜೊತೆ ಮಿಶ್ರಣಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. 2030ರೊಳಗೆ ಹಸಿರು ಹೈಡ್ರೋಜನ್ ಉತ್ಪಾದನೆಯನ್ನು 5 ಮಿಲಿಯನ್ ಟನ್ ಗಳಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಹಸಿರು ಹೈಡ್ರೋಜನ್ ಉತ್ಪಾದನೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದರು.

ಕಲ್ಲಿದ್ದಲು ಅನಿಲೀಕರಣ ಸೇರಿದಂತೆ ವಿನೂತನ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ನಡೆಯುತ್ತಿದ್ದು, ಭವಿಷ್ಯದ ಇಂಧನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಕಲ್ಲಿದ್ದಲು ವಲಯದಲ್ಲಿ 31 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದೇಶದ ದೈನಂದಿನ ಕಚ್ಚಾ ತೈಲ ಬಳಕೆ 5.6 ಮಿಲಿಯನ್ ಟನ್ ಗಳಷ್ಟಿದ್ದು, ಸೌರ ಹಾಗೂ ಇತರ ಶುದ್ಧ ಇಂಧನ ವಲಯಗಳಿಗೆ ಪರಿವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ 2070ರೊಳಗೆ ಶೂನ್ಯ ವಿಸರ್ಜನೆ (Net Zero) ರಾಷ್ಟ್ರೀಯ ಗುರಿಯನ್ನು ತಲುಪುವ ವಿಶ್ವಾಸವಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಭಾರತ ವಿಶ್ವದ 2ನೇ ಅತಿದೊಡ್ಡ ಕಲ್ಲಿದ್ದಲು ಉತ್ಪಾದಕ ದೇಶವಾಗಿದ್ದು, 2024-25ನೇ ಸಾಲಿನಲ್ಲಿ 1,047 ಮಿಲಿಯನ್ ಟನ್ ಗೂ ಅಧಿಕ ಕಲ್ಲಿದ್ದಲು ಉತ್ಪಾದಿಸಲಾಗಿದೆ. ಆಮದು ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಸುಮಾರು 60 ಸಾವಿರ ಕೋಟಿ ರೂಪಾಯಿ ವಿದೇಶಿ ವಿನಿಮಯ ಉಳಿತಾಯವಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

7 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

8 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

8 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

8 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

24 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago