Advertisement
ಸುದ್ದಿಗಳು

2030 ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಗುರಿ | ರಾಜ್ಯಸಭೆಯಲ್ಲಿ ಕೇಂದ್ರದ ಘೋಷಣೆ

Share

ದೇಶದಲ್ಲಿ ಹಸಿರು ಇಂಧನ ಹಾಗೂ ಮರುಬಳಕೆ ಇಂಧನ ವಲಯದಲ್ಲಿ ಅಭೂತಪೂರ್ವ ಕೆಲಸಗಳು ನಡೆಯುತ್ತಿವೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪುರಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಮರುಬಳಕೆ ಇಂಧನದ ವೈವಿಧ್ಯೀಕರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಶೇಕಡಾ 20ರಷ್ಟು ಜೈವಿಕ ಇಂಧನವನ್ನು ಪೆಟ್ರೋಲ್ ಜೊತೆ ಮಿಶ್ರಣಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. 2030ರೊಳಗೆ ಹಸಿರು ಹೈಡ್ರೋಜನ್ ಉತ್ಪಾದನೆಯನ್ನು 5 ಮಿಲಿಯನ್ ಟನ್ ಗಳಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಹಸಿರು ಹೈಡ್ರೋಜನ್ ಉತ್ಪಾದನೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದರು.

ಕಲ್ಲಿದ್ದಲು ಅನಿಲೀಕರಣ ಸೇರಿದಂತೆ ವಿನೂತನ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ನಡೆಯುತ್ತಿದ್ದು, ಭವಿಷ್ಯದ ಇಂಧನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಕಲ್ಲಿದ್ದಲು ವಲಯದಲ್ಲಿ 31 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದೇಶದ ದೈನಂದಿನ ಕಚ್ಚಾ ತೈಲ ಬಳಕೆ 5.6 ಮಿಲಿಯನ್ ಟನ್ ಗಳಷ್ಟಿದ್ದು, ಸೌರ ಹಾಗೂ ಇತರ ಶುದ್ಧ ಇಂಧನ ವಲಯಗಳಿಗೆ ಪರಿವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ 2070ರೊಳಗೆ ಶೂನ್ಯ ವಿಸರ್ಜನೆ (Net Zero) ರಾಷ್ಟ್ರೀಯ ಗುರಿಯನ್ನು ತಲುಪುವ ವಿಶ್ವಾಸವಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಭಾರತ ವಿಶ್ವದ 2ನೇ ಅತಿದೊಡ್ಡ ಕಲ್ಲಿದ್ದಲು ಉತ್ಪಾದಕ ದೇಶವಾಗಿದ್ದು, 2024-25ನೇ ಸಾಲಿನಲ್ಲಿ 1,047 ಮಿಲಿಯನ್ ಟನ್ ಗೂ ಅಧಿಕ ಕಲ್ಲಿದ್ದಲು ಉತ್ಪಾದಿಸಲಾಗಿದೆ. ಆಮದು ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಸುಮಾರು 60 ಸಾವಿರ ಕೋಟಿ ರೂಪಾಯಿ ವಿದೇಶಿ ವಿನಿಮಯ ಉಳಿತಾಯವಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

6 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

8 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

9 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

1 day ago