ದೇಶದಲ್ಲಿ ಹಸಿರು ಇಂಧನ ಹಾಗೂ ಮರುಬಳಕೆ ಇಂಧನ ವಲಯದಲ್ಲಿ ಅಭೂತಪೂರ್ವ ಕೆಲಸಗಳು ನಡೆಯುತ್ತಿವೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಮರುಬಳಕೆ ಇಂಧನದ ವೈವಿಧ್ಯೀಕರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಶೇಕಡಾ 20ರಷ್ಟು ಜೈವಿಕ ಇಂಧನವನ್ನು ಪೆಟ್ರೋಲ್ ಜೊತೆ ಮಿಶ್ರಣಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. 2030ರೊಳಗೆ ಹಸಿರು ಹೈಡ್ರೋಜನ್ ಉತ್ಪಾದನೆಯನ್ನು 5 ಮಿಲಿಯನ್ ಟನ್ ಗಳಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಹಸಿರು ಹೈಡ್ರೋಜನ್ ಉತ್ಪಾದನೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದರು.
ಕಲ್ಲಿದ್ದಲು ಅನಿಲೀಕರಣ ಸೇರಿದಂತೆ ವಿನೂತನ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ನಡೆಯುತ್ತಿದ್ದು, ಭವಿಷ್ಯದ ಇಂಧನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಕಲ್ಲಿದ್ದಲು ವಲಯದಲ್ಲಿ 31 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ದೇಶದ ದೈನಂದಿನ ಕಚ್ಚಾ ತೈಲ ಬಳಕೆ 5.6 ಮಿಲಿಯನ್ ಟನ್ ಗಳಷ್ಟಿದ್ದು, ಸೌರ ಹಾಗೂ ಇತರ ಶುದ್ಧ ಇಂಧನ ವಲಯಗಳಿಗೆ ಪರಿವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ 2070ರೊಳಗೆ ಶೂನ್ಯ ವಿಸರ್ಜನೆ (Net Zero) ರಾಷ್ಟ್ರೀಯ ಗುರಿಯನ್ನು ತಲುಪುವ ವಿಶ್ವಾಸವಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಭಾರತ ವಿಶ್ವದ 2ನೇ ಅತಿದೊಡ್ಡ ಕಲ್ಲಿದ್ದಲು ಉತ್ಪಾದಕ ದೇಶವಾಗಿದ್ದು, 2024-25ನೇ ಸಾಲಿನಲ್ಲಿ 1,047 ಮಿಲಿಯನ್ ಟನ್ ಗೂ ಅಧಿಕ ಕಲ್ಲಿದ್ದಲು ಉತ್ಪಾದಿಸಲಾಗಿದೆ. ಆಮದು ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಸುಮಾರು 60 ಸಾವಿರ ಕೋಟಿ ರೂಪಾಯಿ ವಿದೇಶಿ ವಿನಿಮಯ ಉಳಿತಾಯವಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ…
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…