ಸುಳ್ಯ ಸ್ನೇಹ ಶಾಲೆಯಲ್ಲಿ ಪರಿಸರ ಸಂವಹನ ಸರಣಿ ಕಾರ್ಯಕ್ರಮ ಉದ್ಘಾಟನೆ | ಅರಣ್ಯನಾಶದ ತಡೆಗೆ ಹಸಿರು ಶಾಲೆಗಳು ಬೇಕು – ಪರಿಸರ ತಜ್ಞ ಅರುಣ್ ಕಶ್ಯಪ್

August 19, 2024
11:01 AM

ಒಂದೆಡೆ ರೈತರು ಹಳ್ಳಿಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಇನ್ನೊಂದು ಕಡೆಯಿಂದ ಕೈಗಾರಿಕೊದ್ಯಮಿಗಳು ಅರಣ್ಯಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದು ಅಭಿವೃದ್ಧಿಯ ಲಕ್ಷಣ ಅಲ್ಲ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಸಲಹೆಗಾರ, ಪರಿಸರತಜ್ಞ ದೆಹಲಿಯ ಅರುಣ್‌ ಕಶ್ಯಪ್‌ ಹೇಳಿದರು.

Advertisement

ಪರಿಸರ ಸಂವಹನ ಸರಣಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಪರಿಸರದ ಉಳಿವು ಇಂದಿನ ಅಗತ್ಯ. ಹಸಿರು ಶಾಲೆಯ ನಿರ್ಮಾಣದ ಮೂಲಕ ಮಕ್ಕಳಲ್ಲಿ ಪರಿಸರದ ಕಾಳಜಿಯನ್ನು ಬೆಳೆಸಿ ಕೃಷಿಯಲ್ಲಿ ಆಸಕ್ತಿ ಮೂಡಿಸುವ ಮೂಲಕ ಕೃಷಿಯನ್ನೂ ಉಳಿಸಬೇಕಿದೆ ಎಂದರು.

ಸುಳ್ಯದ ಸ್ನೇಹ ಶಾಲೆಯಲ್ಲಿ ಪರಿಸರ ಸಂವಹನ ಸರಣಿ ಕಾರ್ಯಕ್ರಮಗಳನ್ನು  ಉದ್ಘಾಟಿಸಿದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ ಪರಿಸರ ಸಂರಕ್ಷಣೆಯನ್ನು ಅಲಕ್ಷಿಸಿದರೆ ಭವಿಷ್ಯದಲ್ಲಿ ಹೆಚ್ಚಿನ ದುರಂತಗಳನ್ನು ಕಾಣಬೇಕಾದೀತು ಎಂದರು.

ಕಾರ್ಯಕ್ರಮದಲ್ಲಿ ಪ್ರಸ್ತಾವನೆಗೈದು ಸ್ವಾಗತಿಸಿದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆಯವರು ಪರಿಸರ ಸಂವಹನದ ಮೂಲಕ ಮಕ್ಕಳಿಗೂ, ಪೋಷಕರಿಗೂ ಪರಿಸರದ ಕಾಳಜಿಯನ್ನು ಬೆಳೆಸುವುದು ಈ ಸರಣಿ ಕಾರ್ಯಕ್ರಮದ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಮನೆಯಿಂದ ವಿಶೇಷ ಗಿಡಗಳನ್ನು ಶಾಲೆಯಲ್ಲಿ ನೆಡುವುದು, ಮಕ್ಕಳ ಮನೆಯಲ್ಲಿ ಇನ್ನೊಂದು ವಿಶೇಷ ಗಿಡಗಳನ್ನು ನೆಡುವ ಮೂಲಕ ಸಂವಹನ ಮುಂದುವರಿಯುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಸುಳ್ಯ, ಪುತ್ತೂರು ಮತ್ತು ವಿಟ್ಲ ವಲಯಗಳಿಂದ ಪರಿಸರಸಕ್ತ ಕೃಷಿಕರು ಭಾಗವಹಿಸಿದ್ದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಸಿ ಜಿ ವೆಂಕಟಗಿರಿ ವಂದಿಸಿದರು.ಸ್ನೇಹ ಶಿಕ್ಷಣ ಸಂಸ್ಥೆಯ ಶಿಕ್ಷಕ ದೇವಿಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು.

There is a trend where farmers are abandoning villages while industrialists are encroaching on forests. Arun Kashyap, an environmentalist based in Delhi and consultant for Sneha Education Institute, believes this is not indicative of true development.

As the keynote speaker at the launch of the Environmental Communication Series program, he emphasized the importance of environmental preservation in today’s world. He highlighted the significance of instilling awareness about the environment among children through the establishment of green schools, and stressed the need to cultivate interest in agriculture to protect our agricultural resources.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ
May 7, 2025
7:00 AM
by: ದಿವ್ಯ ಮಹೇಶ್
ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |
May 7, 2025
6:05 AM
by: ದ ರೂರಲ್ ಮಿರರ್.ಕಾಂ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group