Advertisement
ಸುದ್ದಿಗಳು

ಸುಳ್ಯ ಸ್ನೇಹ ಶಾಲೆಯಲ್ಲಿ ಪರಿಸರ ಸಂವಹನ ಸರಣಿ ಕಾರ್ಯಕ್ರಮ ಉದ್ಘಾಟನೆ | ಅರಣ್ಯನಾಶದ ತಡೆಗೆ ಹಸಿರು ಶಾಲೆಗಳು ಬೇಕು – ಪರಿಸರ ತಜ್ಞ ಅರುಣ್ ಕಶ್ಯಪ್

Share

ಒಂದೆಡೆ ರೈತರು ಹಳ್ಳಿಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಇನ್ನೊಂದು ಕಡೆಯಿಂದ ಕೈಗಾರಿಕೊದ್ಯಮಿಗಳು ಅರಣ್ಯಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದು ಅಭಿವೃದ್ಧಿಯ ಲಕ್ಷಣ ಅಲ್ಲ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಸಲಹೆಗಾರ, ಪರಿಸರತಜ್ಞ ದೆಹಲಿಯ ಅರುಣ್‌ ಕಶ್ಯಪ್‌ ಹೇಳಿದರು.

ಪರಿಸರ ಸಂವಹನ ಸರಣಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಪರಿಸರದ ಉಳಿವು ಇಂದಿನ ಅಗತ್ಯ. ಹಸಿರು ಶಾಲೆಯ ನಿರ್ಮಾಣದ ಮೂಲಕ ಮಕ್ಕಳಲ್ಲಿ ಪರಿಸರದ ಕಾಳಜಿಯನ್ನು ಬೆಳೆಸಿ ಕೃಷಿಯಲ್ಲಿ ಆಸಕ್ತಿ ಮೂಡಿಸುವ ಮೂಲಕ ಕೃಷಿಯನ್ನೂ ಉಳಿಸಬೇಕಿದೆ ಎಂದರು.

ಸುಳ್ಯದ ಸ್ನೇಹ ಶಾಲೆಯಲ್ಲಿ ಪರಿಸರ ಸಂವಹನ ಸರಣಿ ಕಾರ್ಯಕ್ರಮಗಳನ್ನು  ಉದ್ಘಾಟಿಸಿದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ ಪರಿಸರ ಸಂರಕ್ಷಣೆಯನ್ನು ಅಲಕ್ಷಿಸಿದರೆ ಭವಿಷ್ಯದಲ್ಲಿ ಹೆಚ್ಚಿನ ದುರಂತಗಳನ್ನು ಕಾಣಬೇಕಾದೀತು ಎಂದರು.

ಕಾರ್ಯಕ್ರಮದಲ್ಲಿ ಪ್ರಸ್ತಾವನೆಗೈದು ಸ್ವಾಗತಿಸಿದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆಯವರು ಪರಿಸರ ಸಂವಹನದ ಮೂಲಕ ಮಕ್ಕಳಿಗೂ, ಪೋಷಕರಿಗೂ ಪರಿಸರದ ಕಾಳಜಿಯನ್ನು ಬೆಳೆಸುವುದು ಈ ಸರಣಿ ಕಾರ್ಯಕ್ರಮದ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಮನೆಯಿಂದ ವಿಶೇಷ ಗಿಡಗಳನ್ನು ಶಾಲೆಯಲ್ಲಿ ನೆಡುವುದು, ಮಕ್ಕಳ ಮನೆಯಲ್ಲಿ ಇನ್ನೊಂದು ವಿಶೇಷ ಗಿಡಗಳನ್ನು ನೆಡುವ ಮೂಲಕ ಸಂವಹನ ಮುಂದುವರಿಯುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಸುಳ್ಯ, ಪುತ್ತೂರು ಮತ್ತು ವಿಟ್ಲ ವಲಯಗಳಿಂದ ಪರಿಸರಸಕ್ತ ಕೃಷಿಕರು ಭಾಗವಹಿಸಿದ್ದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಸಿ ಜಿ ವೆಂಕಟಗಿರಿ ವಂದಿಸಿದರು.ಸ್ನೇಹ ಶಿಕ್ಷಣ ಸಂಸ್ಥೆಯ ಶಿಕ್ಷಕ ದೇವಿಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು.

There is a trend where farmers are abandoning villages while industrialists are encroaching on forests. Arun Kashyap, an environmentalist based in Delhi and consultant for Sneha Education Institute, believes this is not indicative of true development.

As the keynote speaker at the launch of the Environmental Communication Series program, he emphasized the importance of environmental preservation in today’s world. He highlighted the significance of instilling awareness about the environment among children through the establishment of green schools, and stressed the need to cultivate interest in agriculture to protect our agricultural resources.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

41 minutes ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

51 minutes ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

10 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

10 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

11 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

20 hours ago