ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ | ಪರಿಣಾಮಕಾರಿಯಾದ ತ್ಯಾಜ್ಯನೀರಿನ ನಿರ್ವಹಣಾ ಯೋಜನೆ |

October 26, 2024
6:55 AM

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆ. ಆದರೂ ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.

Advertisement
Advertisement
Advertisement

ಕೋಲಾರ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೀರಿನ ಬಳಕೆ ದಕ್ಷತೆ ಹೆಚ್ಚಿಸುವ ಕುರಿತಾದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದೇಶದ ಏಳು ರಾಜ್ಯಗಳಲ್ಲಿ ಅಂತರ್ಜಲ ಮಟ್ಟ ಆತಂಕಕಾರಿಯಾಗಿ ಕುಸಿದಿತ್ತು. ಈ ವೇಳೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿ 14 ಜಿಲ್ಲೆಗಳ 41 ತಾಲೂಕುಗಳಲ್ಲಿ ಅಟಲ್ ಭೂಜಲ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 645  ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಎಲ್ಲ ಇಲಾಖೆಗಳು ಕಾರ್ಯಾರಂಭ ಮಾಡಿವೆ. ಅಂತರ್ಜಲದಿಂದಾಗಿ ಗೃಹ ಬಳಕೆ, ಕೈಗಾರಿಕೆ ಮತ್ತು ಕೃಷಿಗೆ ನೀರು ಲಭ್ಯವಾಗುವುದು. ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆ.ಸಿ. ವ್ಯಾಲಿ ಯೋಜನೆ(The Koramangala-Challaghatta (KC) Valley project)  ಮೂಲಕ ಕೋಲಾರ ಜಿಲ್ಲೆಯ ಕೆರೆಗಳಿಗೆ ಹರಿಸಲಾಗುತ್ತಿದೆ. ಜನರ ಸಹಕಾರದಿಂದ ಮಾತ್ರ ಇಂತಹ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಸಚಿವ ಬೋಸರಾಜು ಹೇಳಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 27-10-2024 | ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ | ಇನ್ನೂ ಒಂದು ವಾರ ಮಳೆ ಸಾಧ್ಯತೆ |
October 27, 2024
11:58 AM
by: ಸಾಯಿಶೇಖರ್ ಕರಿಕಳ
ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |
October 27, 2024
7:16 AM
by: ದ ರೂರಲ್ ಮಿರರ್.ಕಾಂ
 2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |
October 27, 2024
6:45 AM
by: ದ ರೂರಲ್ ಮಿರರ್.ಕಾಂ
ಮೈಸೂರು ಜಿಲ್ಲೆ | ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿಂದ 239 ಕೋಟಿ ಆರ್ಥಿಕ ಚಟುವಟಿಕೆ |
October 27, 2024
6:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror