ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ | ಪರಿಣಾಮಕಾರಿಯಾದ ತ್ಯಾಜ್ಯನೀರಿನ ನಿರ್ವಹಣಾ ಯೋಜನೆ |

October 26, 2024
6:55 AM

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆ. ಆದರೂ ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.

ಕೋಲಾರ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೀರಿನ ಬಳಕೆ ದಕ್ಷತೆ ಹೆಚ್ಚಿಸುವ ಕುರಿತಾದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದೇಶದ ಏಳು ರಾಜ್ಯಗಳಲ್ಲಿ ಅಂತರ್ಜಲ ಮಟ್ಟ ಆತಂಕಕಾರಿಯಾಗಿ ಕುಸಿದಿತ್ತು. ಈ ವೇಳೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿ 14 ಜಿಲ್ಲೆಗಳ 41 ತಾಲೂಕುಗಳಲ್ಲಿ ಅಟಲ್ ಭೂಜಲ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 645  ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಎಲ್ಲ ಇಲಾಖೆಗಳು ಕಾರ್ಯಾರಂಭ ಮಾಡಿವೆ. ಅಂತರ್ಜಲದಿಂದಾಗಿ ಗೃಹ ಬಳಕೆ, ಕೈಗಾರಿಕೆ ಮತ್ತು ಕೃಷಿಗೆ ನೀರು ಲಭ್ಯವಾಗುವುದು. ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆ.ಸಿ. ವ್ಯಾಲಿ ಯೋಜನೆ(The Koramangala-Challaghatta (KC) Valley project)  ಮೂಲಕ ಕೋಲಾರ ಜಿಲ್ಲೆಯ ಕೆರೆಗಳಿಗೆ ಹರಿಸಲಾಗುತ್ತಿದೆ. ಜನರ ಸಹಕಾರದಿಂದ ಮಾತ್ರ ಇಂತಹ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಸಚಿವ ಬೋಸರಾಜು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror