ಭೂ ಅಂತರ್ಗತ ನೀರಿನ ಒರತೆಗಳು(Water spring). ಮುಖ್ಯವಾಗಿ ಎರಡು ವಿಧಗಳು. ಮೊದಲನೆಯದು ಮೇಲ್ಮೈ ಒರತೆಗಳಾದರೆ, ಎರಡನೆಯದು ಶಿಲಾಸ್ತರದ ನಡುವಣ… ಭೂಮಿಯ ಮೇಲ್ಮೈ ರಚನೆ, ಮೇಲ್ಭಾಗದಲ್ಲಿ ಸುಮಾರು ಒಂದಡಿಯಿಂದ ನೂರಾರು ಅಡಿಗಳ ತನಕ, ಕಲ್ಲು(Rock), ಮಣ್ಣು(Soil), ಶೇಡಿ, ಹೊಯ್ಗೆ(Sand) ಕಳಿತ/ ಕಳೆಯುತ್ತಿರುವ ಸಾವಯವ ವಸ್ತುಗಳು(Fossils) ಮತ್ತು ಇವುಗಳ ಮಿಶ್ರಣ.
ಅದರ ಕೆಳಭಾಗದಲ್ಲಿ ಎಲ್ಲಾ ಭೂ ಪ್ರದೇಶಗಳಲ್ಲಿ ಬಿರುಕುಗಳುಳ್ಳ ಶಿಲಾ ಸ್ತರಗಳು. ಆಡುಭಾಷೆಯಲ್ಲಿ ಹಾಸು ಪಾದೆ…ಈ ಹಾಸುಪಾದೆಗಳ ನಡುವೆ ಸುಮಾರು ಒಂದು ತೆಂಗಿನ ಕಾಯಿಯ ಗಾತ್ರದಿಂದ ಹಿಡಿದು ಒಂದೆರಡು ಗ್ರಾಮಗಳಷ್ಟು ದೊಡ್ಡ ಪೊಟರೆಗಳು…ಈ ಹಾಸುಪಾದೆಗಳ ನಡುವೆ ಮತ್ತು ಪೊಟರೆಗಳ ನಡುವೆ ವಿವಿಧ ಗಾತ್ರದ ಬಿರುಕುಗಳು…
ಮಳೆಗಾಲದಲ್ಲಿ ಸುರಿವ ಮಳೆ ನೀರು, ಮೇಲ್ಭಾಗದ ಪದರವನ್ನು ಪೂರ್ಣವಾಗಿ ತೋಯಿಸಿದ ನಂತರ, ಶಿಲಾ ಸ್ತರವನ್ನು ತಲುಪಿ ಅದರ ಕೆಳಗಿನ/ಒಳಗಿನ ಪೊಟರೆಗಳಲ್ಲಿ ಸಂಚಯವಾಗುತ್ತದೆ. ಒಂದು ಹಂತದ ನಂತರ, ಹೆಚ್ಚಿನ ನೀರು ನದಿಗಳ ಮುಖಾಂತರ ಸಮುದ್ರ ಸೇರುತ್ತದೆ.. ಹಾಗಿದ್ದರೆ ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ. ಅಗಾಧ ಪ್ರಮಾಣದಲ್ಲಿ ಸಾವಯವ ವಸ್ತುಗಳನ್ನು ಸಮುದ್ರ ಜೀವಿಗಳಿಗೆ ಆಹಾರವಾಗಿ ಒದಗಿಸುವ ನೈಸರ್ಗಿಕ ವ್ಯವಸ್ಥೆ…
ಈಗ, ಮೈಲ್ಮೈ ಕಲ್ಲು ಮಣ್ಣು ಸ್ತರದಲ್ಲಿ ಸಂಚಯವಾಗುವ ನೀರು ಒಂದು ಬಹು ಮುಖ್ಯ ಧಾರಕವನ್ನು ಅವಲಂಬಿಸಿದೆ. ಅದುವೇ ಸಾವಯವ ಇಂಗಾಲ. ಇದು ಮುಖ್ಯವಾಗಿ ಸಸ್ಯಗಳ ಕಾಂಡ ಬೇರು, ತರಗೆಲೆ ಅಥವಾ ಇನ್ನಾವುದೇ ಶರೀರ ಭಾಗ ಆಗಿರಬಹುದು ಅಥವಾ ಪ್ರಾಣಿಜನ್ಯವೂ ಆಗಬಹುದು. ಈ ಸಾವಯವ ಇಂಗಾಲದ ಸಾಂದ್ರತೆಯನ್ನು ಅವಲಂಬಿಸಿ ಆ ಭೂ ಪ್ರದೇಶ ಮಳೆ ನೀರನ್ನು ಹಿಡಿದಿಟ್ಟುಕೊಂಡು ಬೇಸಿಗೆಯಲ್ಲಿ ಒರತೆಗಳ ರೂಪದಲ್ಲಿ ಹರಿಯುತ್ತದೆ..
ಮೇಲ್ಭಾಗದಿಂದ ಕೆಳಗಿಳಿದ ನೀರು ಶಿಲಾಸ್ತರದ ಬಿರುಕುಗಳ ಮೂಲಕ ಕೆಳಗಿನ ಪೊಟರೆಗಳಲ್ಲಿ ಸಂಚಯವಾಗುತ್ತದೆ. ಪೊಟರೆಗಳ ನಡುವೆ ಸೆಲೆಗಳ ಸಂಪರ್ಕ ಇದ್ದರೆ, ನೂರಾರು ಮೈಲು ದೂರವೂ ಸಾಗೀತು…. ಆದ್ದರಿಂದ ನೀವು ಒಂದೊಮ್ಮೆ ಬೋರ್ವೆಲ್ ಮರುಪೂರಣ ಮಾಡಿದರೂ ಆ ನೀರು ಪಕ್ಕದ ಜಿಲ್ಲೆಗೂ ಹರಿದೀತು…ಅಥವಾ ಪೊಟರೆ ಚಿಕ್ಕದಿದ್ದರೆ, ಉಕ್ಕಿ ಹರಿದೀತು. ಓವರ್ ಫ್ಲೋ…..
ಎಲ್ಲರೂ ತಿಳಿದಿರುವಂತೆ ನೀರು, ಆಮ್ಲ ಜನಕ ಮತ್ತು ಜಲಜನಕದ ರಾಸಾಯನಿಕ ಬಂಧ. ಇದರಲ್ಲಿ ಜಲಜನಕ ಅತೃಪ್ತ. ಹಾಗಾಗಿ ಅದು “ಇನ್ನೂ ಹೆಚ್ಚಿನದನ್ನು” ಹುಡುಕುತ್ತಿರುತ್ತದೆ.ಆದ್ದರಿಂದ ನೀರು ನೀರನ್ನು ಹುಡುಕುತ್ತದೆ ಮತ್ತು ಹೆಚ್ಚಿನ ಸಾಧ್ಯತೆಗಳಲ್ಲಿ ಪರಸ್ಪರ ಸಂಪರ್ಕ ಸಾಧಿಸುತ್ತದೆ.
ಮೂಲ : ಡಿಜಿಟಲ್ ಮೀಡಿಯಾ
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…