Opinion

ಭೂ ಅಂತರ್ಗತ ನೀರಿನ ಒರತೆಗಳು | ಮೇಲ್ಮೈ ಒರತೆ ಮತ್ತು ಶಿಲಾಸ್ತರದ ನಡುವಣ ನೀರು | ಸಮುದ್ರ ಸೇರುವ ನೀರು ವ್ಯರ್ಥವೇ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂ ಅಂತರ್ಗತ ನೀರಿನ ಒರತೆಗಳು(Water spring). ಮುಖ್ಯವಾಗಿ ಎರಡು ವಿಧಗಳು. ಮೊದಲನೆಯದು ಮೇಲ್ಮೈ ಒರತೆಗಳಾದರೆ, ಎರಡನೆಯದು ಶಿಲಾಸ್ತರದ ನಡುವಣ… ಭೂಮಿಯ ಮೇಲ್ಮೈ ರಚನೆ, ಮೇಲ್ಭಾಗದಲ್ಲಿ ಸುಮಾರು ಒಂದಡಿಯಿಂದ ನೂರಾರು ಅಡಿಗಳ ತನಕ, ಕಲ್ಲು(Rock), ಮಣ್ಣು(Soil), ಶೇಡಿ, ಹೊಯ್ಗೆ(Sand) ಕಳಿತ/ ಕಳೆಯುತ್ತಿರುವ ಸಾವಯವ ವಸ್ತುಗಳು(Fossils) ಮತ್ತು ಇವುಗಳ ಮಿಶ್ರಣ.

Advertisement
Advertisement

ಅದರ ಕೆಳಭಾಗದಲ್ಲಿ ಎಲ್ಲಾ ಭೂ ಪ್ರದೇಶಗಳಲ್ಲಿ ಬಿರುಕುಗಳುಳ್ಳ ಶಿಲಾ ಸ್ತರಗಳು. ಆಡುಭಾಷೆಯಲ್ಲಿ ಹಾಸು ಪಾದೆ…ಈ ಹಾಸುಪಾದೆಗಳ ನಡುವೆ ಸುಮಾರು ಒಂದು ತೆಂಗಿನ ಕಾಯಿಯ ಗಾತ್ರದಿಂದ ಹಿಡಿದು ಒಂದೆರಡು ಗ್ರಾಮಗಳಷ್ಟು ದೊಡ್ಡ ಪೊಟರೆಗಳು…ಈ ಹಾಸುಪಾದೆಗಳ ನಡುವೆ ಮತ್ತು ಪೊಟರೆಗಳ ನಡುವೆ ವಿವಿಧ ಗಾತ್ರದ ಬಿರುಕುಗಳು…

ಮಳೆಗಾಲದಲ್ಲಿ ಸುರಿವ ಮಳೆ ನೀರು, ಮೇಲ್ಭಾಗದ ಪದರವನ್ನು ಪೂರ್ಣವಾಗಿ ತೋಯಿಸಿದ ನಂತರ, ಶಿಲಾ ಸ್ತರವನ್ನು ತಲುಪಿ ಅದರ ಕೆಳಗಿನ/ಒಳಗಿನ ಪೊಟರೆಗಳಲ್ಲಿ ಸಂಚಯವಾಗುತ್ತದೆ. ಒಂದು ಹಂತದ ನಂತರ, ಹೆಚ್ಚಿನ ನೀರು ನದಿಗಳ ಮುಖಾಂತರ ಸಮುದ್ರ ಸೇರುತ್ತದೆ.. ಹಾಗಿದ್ದರೆ ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ. ಅಗಾಧ ಪ್ರಮಾಣದಲ್ಲಿ ಸಾವಯವ ವಸ್ತುಗಳನ್ನು ಸಮುದ್ರ ಜೀವಿಗಳಿಗೆ ಆಹಾರವಾಗಿ ಒದಗಿಸುವ ನೈಸರ್ಗಿಕ ವ್ಯವಸ್ಥೆ…

ಈಗ, ಮೈಲ್ಮೈ ಕಲ್ಲು ಮಣ್ಣು ಸ್ತರದಲ್ಲಿ ಸಂಚಯವಾಗುವ ನೀರು ಒಂದು ಬಹು ಮುಖ್ಯ ಧಾರಕವನ್ನು ಅವಲಂಬಿಸಿದೆ. ಅದುವೇ ಸಾವಯವ ಇಂಗಾಲ. ಇದು ಮುಖ್ಯವಾಗಿ ಸಸ್ಯಗಳ ಕಾಂಡ ಬೇರು, ತರಗೆಲೆ ಅಥವಾ ಇನ್ನಾವುದೇ ಶರೀರ ಭಾಗ ಆಗಿರಬಹುದು ಅಥವಾ ಪ್ರಾಣಿಜನ್ಯವೂ ಆಗಬಹುದು. ಈ ಸಾವಯವ ಇಂಗಾಲದ ಸಾಂದ್ರತೆಯನ್ನು ಅವಲಂಬಿಸಿ ಆ ಭೂ ಪ್ರದೇಶ ಮಳೆ ನೀರನ್ನು ಹಿಡಿದಿಟ್ಟುಕೊಂಡು ಬೇಸಿಗೆಯಲ್ಲಿ ಒರತೆಗಳ ರೂಪದಲ್ಲಿ ಹರಿಯುತ್ತದೆ..

ಮೇಲ್ಭಾಗದಿಂದ ಕೆಳಗಿಳಿದ ನೀರು ಶಿಲಾಸ್ತರದ ಬಿರುಕುಗಳ ಮೂಲಕ ಕೆಳಗಿನ ಪೊಟರೆಗಳಲ್ಲಿ ಸಂಚಯವಾಗುತ್ತದೆ. ಪೊಟರೆಗಳ ನಡುವೆ ಸೆಲೆಗಳ ಸಂಪರ್ಕ ಇದ್ದರೆ, ನೂರಾರು ಮೈಲು ದೂರವೂ ಸಾಗೀತು…. ಆದ್ದರಿಂದ ನೀವು ಒಂದೊಮ್ಮೆ ಬೋರ್ವೆಲ್ ಮರುಪೂರಣ ಮಾಡಿದರೂ ಆ ನೀರು ಪಕ್ಕದ ಜಿಲ್ಲೆಗೂ ಹರಿದೀತು…ಅಥವಾ ಪೊಟರೆ ಚಿಕ್ಕದಿದ್ದರೆ, ಉಕ್ಕಿ ಹರಿದೀತು. ಓವರ್ ಫ್ಲೋ…..

Advertisement

ಎಲ್ಲರೂ ತಿಳಿದಿರುವಂತೆ ನೀರು, ಆಮ್ಲ ಜನಕ ಮತ್ತು ಜಲಜನಕದ ರಾಸಾಯನಿಕ ಬಂಧ. ಇದರಲ್ಲಿ ಜಲಜನಕ ಅತೃಪ್ತ. ಹಾಗಾಗಿ ಅದು “ಇನ್ನೂ ಹೆಚ್ಚಿನದನ್ನು” ಹುಡುಕುತ್ತಿರುತ್ತದೆ.ಆದ್ದರಿಂದ ನೀರು ನೀರನ್ನು ಹುಡುಕುತ್ತದೆ ಮತ್ತು ಹೆಚ್ಚಿನ ಸಾಧ್ಯತೆಗಳಲ್ಲಿ ಪರಸ್ಪರ ಸಂಪರ್ಕ ಸಾಧಿಸುತ್ತದೆ.

ಮೂಲ : ಡಿಜಿಟಲ್ ಮೀಡಿಯಾ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…

1 hour ago

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

1 hour ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

11 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

11 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

12 hours ago