Advertisement
Opinion

ಭೂ ಅಂತರ್ಗತ ನೀರಿನ ಒರತೆಗಳು | ಮೇಲ್ಮೈ ಒರತೆ ಮತ್ತು ಶಿಲಾಸ್ತರದ ನಡುವಣ ನೀರು | ಸಮುದ್ರ ಸೇರುವ ನೀರು ವ್ಯರ್ಥವೇ ?

Share

ಭೂ ಅಂತರ್ಗತ ನೀರಿನ ಒರತೆಗಳು(Water spring). ಮುಖ್ಯವಾಗಿ ಎರಡು ವಿಧಗಳು. ಮೊದಲನೆಯದು ಮೇಲ್ಮೈ ಒರತೆಗಳಾದರೆ, ಎರಡನೆಯದು ಶಿಲಾಸ್ತರದ ನಡುವಣ… ಭೂಮಿಯ ಮೇಲ್ಮೈ ರಚನೆ, ಮೇಲ್ಭಾಗದಲ್ಲಿ ಸುಮಾರು ಒಂದಡಿಯಿಂದ ನೂರಾರು ಅಡಿಗಳ ತನಕ, ಕಲ್ಲು(Rock), ಮಣ್ಣು(Soil), ಶೇಡಿ, ಹೊಯ್ಗೆ(Sand) ಕಳಿತ/ ಕಳೆಯುತ್ತಿರುವ ಸಾವಯವ ವಸ್ತುಗಳು(Fossils) ಮತ್ತು ಇವುಗಳ ಮಿಶ್ರಣ.

ಅದರ ಕೆಳಭಾಗದಲ್ಲಿ ಎಲ್ಲಾ ಭೂ ಪ್ರದೇಶಗಳಲ್ಲಿ ಬಿರುಕುಗಳುಳ್ಳ ಶಿಲಾ ಸ್ತರಗಳು. ಆಡುಭಾಷೆಯಲ್ಲಿ ಹಾಸು ಪಾದೆ…ಈ ಹಾಸುಪಾದೆಗಳ ನಡುವೆ ಸುಮಾರು ಒಂದು ತೆಂಗಿನ ಕಾಯಿಯ ಗಾತ್ರದಿಂದ ಹಿಡಿದು ಒಂದೆರಡು ಗ್ರಾಮಗಳಷ್ಟು ದೊಡ್ಡ ಪೊಟರೆಗಳು…ಈ ಹಾಸುಪಾದೆಗಳ ನಡುವೆ ಮತ್ತು ಪೊಟರೆಗಳ ನಡುವೆ ವಿವಿಧ ಗಾತ್ರದ ಬಿರುಕುಗಳು…

ಮಳೆಗಾಲದಲ್ಲಿ ಸುರಿವ ಮಳೆ ನೀರು, ಮೇಲ್ಭಾಗದ ಪದರವನ್ನು ಪೂರ್ಣವಾಗಿ ತೋಯಿಸಿದ ನಂತರ, ಶಿಲಾ ಸ್ತರವನ್ನು ತಲುಪಿ ಅದರ ಕೆಳಗಿನ/ಒಳಗಿನ ಪೊಟರೆಗಳಲ್ಲಿ ಸಂಚಯವಾಗುತ್ತದೆ. ಒಂದು ಹಂತದ ನಂತರ, ಹೆಚ್ಚಿನ ನೀರು ನದಿಗಳ ಮುಖಾಂತರ ಸಮುದ್ರ ಸೇರುತ್ತದೆ.. ಹಾಗಿದ್ದರೆ ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ. ಅಗಾಧ ಪ್ರಮಾಣದಲ್ಲಿ ಸಾವಯವ ವಸ್ತುಗಳನ್ನು ಸಮುದ್ರ ಜೀವಿಗಳಿಗೆ ಆಹಾರವಾಗಿ ಒದಗಿಸುವ ನೈಸರ್ಗಿಕ ವ್ಯವಸ್ಥೆ…

ಈಗ, ಮೈಲ್ಮೈ ಕಲ್ಲು ಮಣ್ಣು ಸ್ತರದಲ್ಲಿ ಸಂಚಯವಾಗುವ ನೀರು ಒಂದು ಬಹು ಮುಖ್ಯ ಧಾರಕವನ್ನು ಅವಲಂಬಿಸಿದೆ. ಅದುವೇ ಸಾವಯವ ಇಂಗಾಲ. ಇದು ಮುಖ್ಯವಾಗಿ ಸಸ್ಯಗಳ ಕಾಂಡ ಬೇರು, ತರಗೆಲೆ ಅಥವಾ ಇನ್ನಾವುದೇ ಶರೀರ ಭಾಗ ಆಗಿರಬಹುದು ಅಥವಾ ಪ್ರಾಣಿಜನ್ಯವೂ ಆಗಬಹುದು. ಈ ಸಾವಯವ ಇಂಗಾಲದ ಸಾಂದ್ರತೆಯನ್ನು ಅವಲಂಬಿಸಿ ಆ ಭೂ ಪ್ರದೇಶ ಮಳೆ ನೀರನ್ನು ಹಿಡಿದಿಟ್ಟುಕೊಂಡು ಬೇಸಿಗೆಯಲ್ಲಿ ಒರತೆಗಳ ರೂಪದಲ್ಲಿ ಹರಿಯುತ್ತದೆ..

ಮೇಲ್ಭಾಗದಿಂದ ಕೆಳಗಿಳಿದ ನೀರು ಶಿಲಾಸ್ತರದ ಬಿರುಕುಗಳ ಮೂಲಕ ಕೆಳಗಿನ ಪೊಟರೆಗಳಲ್ಲಿ ಸಂಚಯವಾಗುತ್ತದೆ. ಪೊಟರೆಗಳ ನಡುವೆ ಸೆಲೆಗಳ ಸಂಪರ್ಕ ಇದ್ದರೆ, ನೂರಾರು ಮೈಲು ದೂರವೂ ಸಾಗೀತು…. ಆದ್ದರಿಂದ ನೀವು ಒಂದೊಮ್ಮೆ ಬೋರ್ವೆಲ್ ಮರುಪೂರಣ ಮಾಡಿದರೂ ಆ ನೀರು ಪಕ್ಕದ ಜಿಲ್ಲೆಗೂ ಹರಿದೀತು…ಅಥವಾ ಪೊಟರೆ ಚಿಕ್ಕದಿದ್ದರೆ, ಉಕ್ಕಿ ಹರಿದೀತು. ಓವರ್ ಫ್ಲೋ…..

ಎಲ್ಲರೂ ತಿಳಿದಿರುವಂತೆ ನೀರು, ಆಮ್ಲ ಜನಕ ಮತ್ತು ಜಲಜನಕದ ರಾಸಾಯನಿಕ ಬಂಧ. ಇದರಲ್ಲಿ ಜಲಜನಕ ಅತೃಪ್ತ. ಹಾಗಾಗಿ ಅದು “ಇನ್ನೂ ಹೆಚ್ಚಿನದನ್ನು” ಹುಡುಕುತ್ತಿರುತ್ತದೆ.ಆದ್ದರಿಂದ ನೀರು ನೀರನ್ನು ಹುಡುಕುತ್ತದೆ ಮತ್ತು ಹೆಚ್ಚಿನ ಸಾಧ್ಯತೆಗಳಲ್ಲಿ ಪರಸ್ಪರ ಸಂಪರ್ಕ ಸಾಧಿಸುತ್ತದೆ.

ಮೂಲ : ಡಿಜಿಟಲ್ ಮೀಡಿಯಾ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

9 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

15 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

16 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

16 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

23 hours ago