ಅಡಿಕೆ ಬೆಳೆಯ ಮಧ್ಯೆ ಅಂತರ್ ಬೆಳೆಯಾಗಿ ಕಾಫಿ ಮೊದಲಾದ ವಾಣಿಜ್ಯ ಬೆಳೆ ಬೆಳೆಯುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಂಶೋಧನಾ ನಿರ್ದೇಶಕ ಬಿ.ಎಂ. ದುಷ್ಯಂತ ಕುಮಾರ್ ಹೇಳಿದರು. ದಾವಣಗೆರೆ ತಾಲೂಕಿನ ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಕಾಫಿ, ಕಾಳು ಮೆಣಸು ವೈಜ್ಞಾನಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಅಡಿಕೆ ಅಥವಾ ಏಕ ಬೆಳೆಯನ್ನು ಮಾಡುವುದು ಮಾರುಕಟ್ಟೆ ಹಾಗೂ ಭವಿಷ್ಯದ ಕೃಷಿಯ ದೃಷ್ಟಿಯಿಂದ ಸಂಕಷ್ಟ ತರುವ ಸಾಧ್ಯತೆ ಇದೆ. ಇದಕ್ಕಾಗಿ ಮಿಶ್ರ ಬೆಳೆ ಅಗತ್ಯ ಎಂದು ಅವರು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

