ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

November 8, 2022
4:52 PM

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

Advertisement

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror