Advertisement
MIRROR FOCUS

ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

Share

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

6 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

11 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

20 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

21 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago