Advertisement
MIRROR FOCUS

ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

Share

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

12 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

13 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

13 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

13 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago