Advertisement
MIRROR FOCUS

ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

Share

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

Advertisement
Advertisement
Advertisement
Advertisement

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

Advertisement

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago