Advertisement
MIRROR FOCUS

ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

Share

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

Advertisement
Advertisement

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

21 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

21 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

21 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

21 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago