Advertisement
MIRROR FOCUS

ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

Share

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

5 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

6 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

11 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

18 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago