Advertisement
ಸುದ್ದಿಗಳು

#Gruhajyothi | ಉಚಿತ ವಿದ್ಯತ್ ಬೇಕಾದಲ್ಲಿ ಆದಷ್ಟು ಬೇಗ ಅರ್ಜಿ ಸಲ್ಲಿಸಿ | ಇಲ್ಲದಿದ್ದರೆ ಎಂದಿನಂತೆ ಕರೆಂಟ್ ಬಿಲ್ ಕಟ್ಟಬೇಕು…!

Share

ನೂತನ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತವಾಗಿ 200 ಯೂನಿಟ್ ವಿದ್ಯುತ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದಲೇ ಪ್ರಯೋಜನ ಸಿಗಲಿದೆ. ಆದರೆ ನೀವು ಇದಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಮಾತ್ರ ನಿಮಗೆ 200 ಯುನಿಟ್ ಉಚಿತ ವಿದ್ಯುತ್ ಲಭ್ಯವಾಗಲಿದೆ. ಇಲ್ಲದಿದ್ದರೆ ನೀವು ಪ್ರತಿ ತಿಂಗಳು ಎಂದಿನಂತೆ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ.

ಸದ್ಯ ನಮ್ಮ ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅಂದರೆ ಉಚಿತ ಎರಡು ನೂರು ಯೂನಿಟ್ ವಿದ್ಯುತ್ ಪಡೆಯಲು ಸದ್ಯ 90 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಜನರಿಗೆ ಜುಲೈ ಒಂದರಿಂದ ಅಂದರೆ ನೀವು ಜೂನ್ ಒಳಗಡೆ ಅರ್ಜಿ ಸಲ್ಲಿಸಿದ್ದರೆ ಜುಲೈ ಒಂದರಿಂದಲೇ ಸಂಪೂರ್ಣ ಉಚಿತ ವಿದ್ಯುತ್ ನಿಮಗೆ ಸಿಗುತ್ತದೆ.  ಇನ್ನೂ ಯಾರು ಈವರೆಗೂ ಅರ್ಜಿ ಸಲ್ಲಿಸಿಲ್ಲವೋ ಅಂತವರಿಗೆ ಅಗಸ್ಟ್ ನಂತರ ಉಚಿತ ವಿದ್ಯುತ್ ಸಿಗುತ್ತದೆ. ಅದು  ಸರ್ಕಾರ ಹೇಳಿರುವಂತೆ ಜುಲೈ 25ರೊಳಗೆ ನೀವು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ? : ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ https://sevasindhugs.karnataka.gov.in/     ಈ  ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನೀವು ಸೇವಾ ಸಿಂಧು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತೀರಿ, ನಂತರ ನೀವು ಅಲ್ಲಿ ಗೃಹಜೋತಿ ಅಂತ ಕ್ಲಿಕ್ ಮಾಡಬೇಕು. ಇದಾದ ನಂತರ ನನ್ನ ಮಾಹಿತಿ ನೋಂದಾಣಿಗೆ ಒಪ್ಪಿದ್ದೇನೆ ಎಂದು ಸಣ್ಣ ಬಾಕ್ಸ್ ಒಳಗೆ ಕ್ಷಿಕ್ ಮಾಡಿದ ನಂತರ ಕೆಳಗೆ ನೀಡಿರುವ ಕ್ಯಾಪ್ಚವನ್ನು ಸಂಪೂರ್ಣ ಭರ್ತಿ ಮಾಡಬೇಕು ಮಾಡಿದ ನಂತರವೇ ಅಗ್ರಿ ಅಂತ ಕ್ಲಿಕ್ ಮಾಡಬೇಕು.

ನಂತರ ನಿಮ್ಮ  ಅರ್ಜಿದಾರರ ಆಧಾರ್ ನಂಬರ್ ಹಾಕಿ. ನಿಮ್ಮ ಆಧಾರ ನಂಬರಿಗೆ ಲಿಂಕ್ ಆದ ಮೊಬೈಲ್ ನಂಬರಿಗೆ ಒಟಿಪಿ ಬರುತ್ತದೆ ಅದನ್ನು ತುಂಬಿರಿ. ನಂತರ ನಿಮ್ಮ ಎಸ್ಕಾಂ ಹೆಸರು ಹಾಕಿ ಇದಾದ ನಂತರ ಲೈಫ್ ಬಿಲ್ ನಲ್ಲಿ ಇರುವಂತೆ ಅಕೌಂಟ್ ನಂಬರ್ ಹಾಕಿ ನಂತರ ತನ್ನಿಂದ ತಾನೇ ಖಾತೆದಾರರ ಹೆಸರು ಬರುತ್ತದೆ. ಹೇಗಿರುತ್ತಯೋ ಹಾಗೆ ಕರೆಂಟ್ ಬಿಲ್ ನಲ್ಲಿ ಇದಾದ ನಂತರ ಖಾತೆದಾರರ ವಿಳಾಸ ಕೂಡ ಬರುತ್ತದೆ ನಂತರ ನೀವು ಎಸ್ಕಾಂ ಹೆಸರು ಆಯ್ಕೆ ಮಾಡಿ ಇದಾದ ನಂತರ ನೀವು ಸಂತ ಮನೆಯಲ್ಲಿ ಇದ್ದೀರು ಅಥವಾ ಬಾಡಿಗೆ ಮನೆಯಲ್ಲಿ ಇದ್ದೀರೋ ಎಂಬುದನ್ನು ಆಯ್ಕೆ ಮಾಡಿ ಇದಾದ ನಂತರ ನಿಮ್ಮ ಆದರ ಸಂಖ್ಯೆ ನಮೂದಿಸಿ ಸಂವಹನಕ್ಕಾಗಿ ನಿಮ್ಮ ದೂರವಾಣಿ ಸಂಖ್ಯೆಯನ್ನು ಹಾಕಿ ನಿಮಗೆ ಓಟಿಪಿ ಬರುತ್ತದೆ.  ಇದಾದ ನಂತರ ಅಗ್ರಿ ಅಂತ ಕೊಟ್ಟು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.

ಇದಾದ ನಂತರ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ. ಅಲ್ಲಿಗೆ ನೀವು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಿ ಎಂದರ್ಥ. ಉಚಿತ ವಿದ್ಯುತ್ ಬೇಕಾದಲ್ಲಿ ಜುಲೈ 25ರ ಒಳಗೆ ಅರ್ಜಿ ಸಲ್ಲಿಸಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

4 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

4 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

13 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

14 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

19 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

21 hours ago