ಕೃಷಿ ಯಂತ್ರೋಪಕರಣಗಳ ಮೇಲೆ ಜಿಎಸ್‌ಟಿ ದರ ಕಡಿತ ಹಿನ್ನೆಲೆ | ಕೇಂದ್ರ ಸಚಿವ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಭೆ

September 19, 2025
9:26 PM

ಕೃಷಿ ಯಂತ್ರೋಪಕರಣಗಳು ಮತ್ತು ಉಪಕರಣಗಳ ಮೇಲಿನ GST ದರಗಳನ್ನು ಶೇಕಡಾ 12-18 ರಿಂದ ಶೇಕಡಾ 5 ಕ್ಕೆ ಇಳಿಸಿರುವ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದರು.

ಕೃಷಿ ಯಂತ್ರೋಪಕರಣಗಳ GST ಸುಧಾರಣೆಗಳ ಕುರಿತು ನಡೆದ ಸಭೆಯಲ್ಲಿ ಅವರು,  ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ NDA ಸರ್ಕಾರವು ಜನರ ಜೀವನವನ್ನು ಸುಧಾರಿಸುವಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಇದೀಗ GST ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕೃಷಿಕರಿಗೂ ಅನುಕೂಲ ಆಗಲಿದೆ ಎಂದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ, ಸರ್ಕಾರದ ಯೋಜನೆಗಳು ನೇರವಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ GST ಕಡಿತದಿಂದಾಗಿ ರೈತ ಸಮುದಾಯದ ಆದಾಯದಲ್ಲಿ ಬಹು ದೊಡ್ಡ ಬದಲಾವಣೆ ಆಗಲಿದೆ ಎಂದು ಸಚಿವರು ಹೇಳಿದರು.  ಜೈವಿಕ ಕೀಟನಾಶಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಮೇಲಿನ GST ದರ ಕೂಡ ಕಡಿಮೆಯಾಗಿದೆ. ಇದು ರೈತರಿಗೆ ಪ್ರಯೋಜನವನ್ನು ನೀಡುವುದಲ್ಲದೇ ರಾಸಾಯನಿಕ ಗೊಬ್ಬರಗಳಿಂದ ಜೈವಿಕ ಗೊಬ್ಬರಗಳತ್ತ ಬದಲಾವಣೆಯನ್ನು ಉತ್ತೇಜಿಸುತ್ತದೆ. ಡೈರಿ ವಲಯದಲ್ಲಿ, ಹಾಲು ಮತ್ತು ಚೀಸ್ ಮೇಲಿನ GSTಯನ್ನು ತೆಗೆದುಹಾಕುವುದರಿಂದ ಗ್ರಾಹಕರಿಗೆ ಪ್ರಯೋಜನವಾಗುವುದಲ್ಲದೇ, ರೈತರು, ಜಾನುವಾರು ಸಾಕಣೆದಾರರು ಮತ್ತು ಹಾಲು ಉತ್ಪಾದಕರಿಗೆ ಗಮನಾರ್ಹ ಪರಿಹಾರ ದೊರೆಯುತ್ತದೆ ಎಂದು ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror