Advertisement
MIRROR FOCUS

ಕೃಷಿ ಯಂತ್ರೋಪಕರಣಗಳ ಮೇಲೆ ಜಿಎಸ್‌ಟಿ ದರ ಕಡಿತ ಹಿನ್ನೆಲೆ | ಕೇಂದ್ರ ಸಚಿವ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಭೆ

Share

ಕೃಷಿ ಯಂತ್ರೋಪಕರಣಗಳು ಮತ್ತು ಉಪಕರಣಗಳ ಮೇಲಿನ GST ದರಗಳನ್ನು ಶೇಕಡಾ 12-18 ರಿಂದ ಶೇಕಡಾ 5 ಕ್ಕೆ ಇಳಿಸಿರುವ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದರು.

ಕೃಷಿ ಯಂತ್ರೋಪಕರಣಗಳ GST ಸುಧಾರಣೆಗಳ ಕುರಿತು ನಡೆದ ಸಭೆಯಲ್ಲಿ ಅವರು,  ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ NDA ಸರ್ಕಾರವು ಜನರ ಜೀವನವನ್ನು ಸುಧಾರಿಸುವಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಇದೀಗ GST ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕೃಷಿಕರಿಗೂ ಅನುಕೂಲ ಆಗಲಿದೆ ಎಂದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ, ಸರ್ಕಾರದ ಯೋಜನೆಗಳು ನೇರವಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ GST ಕಡಿತದಿಂದಾಗಿ ರೈತ ಸಮುದಾಯದ ಆದಾಯದಲ್ಲಿ ಬಹು ದೊಡ್ಡ ಬದಲಾವಣೆ ಆಗಲಿದೆ ಎಂದು ಸಚಿವರು ಹೇಳಿದರು.  ಜೈವಿಕ ಕೀಟನಾಶಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಮೇಲಿನ GST ದರ ಕೂಡ ಕಡಿಮೆಯಾಗಿದೆ. ಇದು ರೈತರಿಗೆ ಪ್ರಯೋಜನವನ್ನು ನೀಡುವುದಲ್ಲದೇ ರಾಸಾಯನಿಕ ಗೊಬ್ಬರಗಳಿಂದ ಜೈವಿಕ ಗೊಬ್ಬರಗಳತ್ತ ಬದಲಾವಣೆಯನ್ನು ಉತ್ತೇಜಿಸುತ್ತದೆ. ಡೈರಿ ವಲಯದಲ್ಲಿ, ಹಾಲು ಮತ್ತು ಚೀಸ್ ಮೇಲಿನ GSTಯನ್ನು ತೆಗೆದುಹಾಕುವುದರಿಂದ ಗ್ರಾಹಕರಿಗೆ ಪ್ರಯೋಜನವಾಗುವುದಲ್ಲದೇ, ರೈತರು, ಜಾನುವಾರು ಸಾಕಣೆದಾರರು ಮತ್ತು ಹಾಲು ಉತ್ಪಾದಕರಿಗೆ ಗಮನಾರ್ಹ ಪರಿಹಾರ ದೊರೆಯುತ್ತದೆ ಎಂದು ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

7 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

15 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

15 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

16 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

24 hours ago