ಸುದ್ದಿಗಳು

ಕ್ಯಾನ್ಸರ್ ಔಷಧಿಗಳ ಜಿಎಸ್ ಟಿ ದರ ಶೇ. 5ಕ್ಕೆ ಇಳಿಕೆ | ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಧಾರ |

Share

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇಕಡ 12ರಿಂದ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾನ್ಸರ್ ಔಷಧಿಗಳ ಬೆಲೆ ಇನ್ನಷ್ಟು ಅಗ್ಗವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Advertisement

ಅವರು ದೆಹಲಿಯಲ್ಲಿಂದು 54ನೇ ಸರಕು ಮತ್ತು ಸೇವಾ ತೆರಿಗೆ – ಜಿಎಸ್ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದರು. ಹಲವು ಲೋಹದ ಅನುಪಯುಕ್ತ ವಸ್ತುಗಳ ಜಿಎಸ್ ಟಿ ದರವನ್ನು 18 ರಿಂದ 12ಕ್ಕೆ ಇಳಿಸಲಾಗಿದೆ ಎಂದರು. ವೈದ್ಯಕೀಯ ಆರೋಗ್ಯ ವಿಮೆ ಮೇಲಿನ ಜಿಎಸ್ ಟಿ ಕಡಿತದ ಕುರಿತು ಸಚಿವರ ತಂಡ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದೇ ವೇಳೆ ಪರಿಹಾರ ಸೆಸ್ ನೀಡುವ ಸಂಬಂಧ ಮತ್ತೊಂದು ಸಚಿವರ ತಂಡ ರಚಿಸಲು ಮಂಡಳಿ ಸಮ್ಮತಿ ನೀಡಿದೆ. ಈ ತಂಡಗಳಿಗೆ ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಎರಡು ಸಚಿವರ ಗುಂಪಿನ ವರದಿಯನ್ನು ನವೆಂಬರ್ ನಲ್ಲಿ ನಡೆಯಲಿರುವ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಎಸ್ ಟಿ ದರ ತರ್ಕಬದ್ಧಗೊಳಿಸುವುದು ಹಾಗೂ ರಿಯಲ್ ಎಸ್ಟೇಟ್ ಕುರಿತಂತೆ ರಚಿಸಲಾಗಿದ್ದ ಸಚಿವರ ಗುಂಪು ತನ್ನ ಎರಡು ವರದಿಯನ್ನು ಸಲ್ಲಿಸಿದೆ. ಆನ್ ಲೈನ್ ಗೇಮಿಂಗ್, ಕ್ಯಾಸಿನೊಗಳ ಸ್ಥಿತಿಗತಿಗಳ ಕುರಿತು ಮಂಡಳಿ ಸಭೆಯಲ್ಲಿ ಪ್ರಸ್ತುತ ಪಡಿಸಲಾಗಿದೆ. ಆನ್ ಲೈನ್ ಗೇಮಿಂಗ್ ನಿಂದ ಬರುವ ಆದಾಯವು ಶೇಕಡ 412ರಷ್ಟು ಹೆಚ್ಚಾಗಿದೆ. ಕಳೆದ 6 ತಿಂಗಳಲ್ಲಿ 6 ಸಾವಿರದ 909 ಕೋಟಿ ರೂಪಾಯಿ ಇದರಿಂದ ಸಂಗ್ರಹವಾಗಿದೆ ಎಂದು ಹೇಳಿದರು. ಪರಿಹಾರ ಸೆಸ್ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, 2026ರ ಮಾರ್ಚ್ ವರೆಗೆ ಪರಿಹಾರ ಸೆಸ್ ಸಂಗ್ರಹಿಸಬಹುದಾಗಿದೆ. ಪಡೆದ ಸಾಲವನ್ನು ಮರು ಪಾವತಿಸಲು ಅದರ ಮೇಲಿನ ಬಡ್ಡಿಯನ್ನು 2026ರ ಜನವರಿ ಒಳಗೆ ಪಾವತಿಸಲು ಅನುಕೂಲವಾಗುವಂತೆ ಪರಿಹಾರ ಸೆಸ್ ಸಂಗ್ರಹಿಸಲಾಗುತ್ತಿದೆ ಎಂದರು.

2025ರ ಮಾರ್ಚ್ ವೇಳೆಗೆ 8 ಲಕ್ಷ 66 ಸಾವಿರದ 706 ಕೋಟಿ ರೂಪಾಯಿ ಪರಿಹಾರದ ಸೆಸ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ತಿಂಗಳ ಸೆಪ್ಟೆಂಬರ್ 5 ರವರೆಗೆ 6 ಲಕ್ಷ 64 ಸಾವಿರದ 203 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಸಮಗ್ರ ಸರಕು ಮತ್ತು ಸೇವಾ ತೆರಿಗೆ ವಿಸ್ತರಣೆ ಸೇರಿದಂತೆ ಜಿಎಸ್ ಟಿ ಮಂಡಳಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

11 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

12 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

13 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

13 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

13 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

13 hours ago