ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇಕಡ 12ರಿಂದ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾನ್ಸರ್ ಔಷಧಿಗಳ ಬೆಲೆ ಇನ್ನಷ್ಟು ಅಗ್ಗವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಅವರು ದೆಹಲಿಯಲ್ಲಿಂದು 54ನೇ ಸರಕು ಮತ್ತು ಸೇವಾ ತೆರಿಗೆ – ಜಿಎಸ್ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದರು. ಹಲವು ಲೋಹದ ಅನುಪಯುಕ್ತ ವಸ್ತುಗಳ ಜಿಎಸ್ ಟಿ ದರವನ್ನು 18 ರಿಂದ 12ಕ್ಕೆ ಇಳಿಸಲಾಗಿದೆ ಎಂದರು. ವೈದ್ಯಕೀಯ ಆರೋಗ್ಯ ವಿಮೆ ಮೇಲಿನ ಜಿಎಸ್ ಟಿ ಕಡಿತದ ಕುರಿತು ಸಚಿವರ ತಂಡ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದೇ ವೇಳೆ ಪರಿಹಾರ ಸೆಸ್ ನೀಡುವ ಸಂಬಂಧ ಮತ್ತೊಂದು ಸಚಿವರ ತಂಡ ರಚಿಸಲು ಮಂಡಳಿ ಸಮ್ಮತಿ ನೀಡಿದೆ. ಈ ತಂಡಗಳಿಗೆ ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಎರಡು ಸಚಿವರ ಗುಂಪಿನ ವರದಿಯನ್ನು ನವೆಂಬರ್ ನಲ್ಲಿ ನಡೆಯಲಿರುವ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಜಿಎಸ್ ಟಿ ದರ ತರ್ಕಬದ್ಧಗೊಳಿಸುವುದು ಹಾಗೂ ರಿಯಲ್ ಎಸ್ಟೇಟ್ ಕುರಿತಂತೆ ರಚಿಸಲಾಗಿದ್ದ ಸಚಿವರ ಗುಂಪು ತನ್ನ ಎರಡು ವರದಿಯನ್ನು ಸಲ್ಲಿಸಿದೆ. ಆನ್ ಲೈನ್ ಗೇಮಿಂಗ್, ಕ್ಯಾಸಿನೊಗಳ ಸ್ಥಿತಿಗತಿಗಳ ಕುರಿತು ಮಂಡಳಿ ಸಭೆಯಲ್ಲಿ ಪ್ರಸ್ತುತ ಪಡಿಸಲಾಗಿದೆ. ಆನ್ ಲೈನ್ ಗೇಮಿಂಗ್ ನಿಂದ ಬರುವ ಆದಾಯವು ಶೇಕಡ 412ರಷ್ಟು ಹೆಚ್ಚಾಗಿದೆ. ಕಳೆದ 6 ತಿಂಗಳಲ್ಲಿ 6 ಸಾವಿರದ 909 ಕೋಟಿ ರೂಪಾಯಿ ಇದರಿಂದ ಸಂಗ್ರಹವಾಗಿದೆ ಎಂದು ಹೇಳಿದರು. ಪರಿಹಾರ ಸೆಸ್ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, 2026ರ ಮಾರ್ಚ್ ವರೆಗೆ ಪರಿಹಾರ ಸೆಸ್ ಸಂಗ್ರಹಿಸಬಹುದಾಗಿದೆ. ಪಡೆದ ಸಾಲವನ್ನು ಮರು ಪಾವತಿಸಲು ಅದರ ಮೇಲಿನ ಬಡ್ಡಿಯನ್ನು 2026ರ ಜನವರಿ ಒಳಗೆ ಪಾವತಿಸಲು ಅನುಕೂಲವಾಗುವಂತೆ ಪರಿಹಾರ ಸೆಸ್ ಸಂಗ್ರಹಿಸಲಾಗುತ್ತಿದೆ ಎಂದರು.
2025ರ ಮಾರ್ಚ್ ವೇಳೆಗೆ 8 ಲಕ್ಷ 66 ಸಾವಿರದ 706 ಕೋಟಿ ರೂಪಾಯಿ ಪರಿಹಾರದ ಸೆಸ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ತಿಂಗಳ ಸೆಪ್ಟೆಂಬರ್ 5 ರವರೆಗೆ 6 ಲಕ್ಷ 64 ಸಾವಿರದ 203 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಸಮಗ್ರ ಸರಕು ಮತ್ತು ಸೇವಾ ತೆರಿಗೆ ವಿಸ್ತರಣೆ ಸೇರಿದಂತೆ ಜಿಎಸ್ ಟಿ ಮಂಡಳಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು ಎಂದರು.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…