Advertisement
ಸುದ್ದಿಗಳು

ಕ್ಯಾನ್ಸರ್ ಔಷಧಿಗಳ ಜಿಎಸ್ ಟಿ ದರ ಶೇ. 5ಕ್ಕೆ ಇಳಿಕೆ | ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಧಾರ |

Share

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇಕಡ 12ರಿಂದ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾನ್ಸರ್ ಔಷಧಿಗಳ ಬೆಲೆ ಇನ್ನಷ್ಟು ಅಗ್ಗವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅವರು ದೆಹಲಿಯಲ್ಲಿಂದು 54ನೇ ಸರಕು ಮತ್ತು ಸೇವಾ ತೆರಿಗೆ – ಜಿಎಸ್ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದರು. ಹಲವು ಲೋಹದ ಅನುಪಯುಕ್ತ ವಸ್ತುಗಳ ಜಿಎಸ್ ಟಿ ದರವನ್ನು 18 ರಿಂದ 12ಕ್ಕೆ ಇಳಿಸಲಾಗಿದೆ ಎಂದರು. ವೈದ್ಯಕೀಯ ಆರೋಗ್ಯ ವಿಮೆ ಮೇಲಿನ ಜಿಎಸ್ ಟಿ ಕಡಿತದ ಕುರಿತು ಸಚಿವರ ತಂಡ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದೇ ವೇಳೆ ಪರಿಹಾರ ಸೆಸ್ ನೀಡುವ ಸಂಬಂಧ ಮತ್ತೊಂದು ಸಚಿವರ ತಂಡ ರಚಿಸಲು ಮಂಡಳಿ ಸಮ್ಮತಿ ನೀಡಿದೆ. ಈ ತಂಡಗಳಿಗೆ ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಎರಡು ಸಚಿವರ ಗುಂಪಿನ ವರದಿಯನ್ನು ನವೆಂಬರ್ ನಲ್ಲಿ ನಡೆಯಲಿರುವ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಎಸ್ ಟಿ ದರ ತರ್ಕಬದ್ಧಗೊಳಿಸುವುದು ಹಾಗೂ ರಿಯಲ್ ಎಸ್ಟೇಟ್ ಕುರಿತಂತೆ ರಚಿಸಲಾಗಿದ್ದ ಸಚಿವರ ಗುಂಪು ತನ್ನ ಎರಡು ವರದಿಯನ್ನು ಸಲ್ಲಿಸಿದೆ. ಆನ್ ಲೈನ್ ಗೇಮಿಂಗ್, ಕ್ಯಾಸಿನೊಗಳ ಸ್ಥಿತಿಗತಿಗಳ ಕುರಿತು ಮಂಡಳಿ ಸಭೆಯಲ್ಲಿ ಪ್ರಸ್ತುತ ಪಡಿಸಲಾಗಿದೆ. ಆನ್ ಲೈನ್ ಗೇಮಿಂಗ್ ನಿಂದ ಬರುವ ಆದಾಯವು ಶೇಕಡ 412ರಷ್ಟು ಹೆಚ್ಚಾಗಿದೆ. ಕಳೆದ 6 ತಿಂಗಳಲ್ಲಿ 6 ಸಾವಿರದ 909 ಕೋಟಿ ರೂಪಾಯಿ ಇದರಿಂದ ಸಂಗ್ರಹವಾಗಿದೆ ಎಂದು ಹೇಳಿದರು. ಪರಿಹಾರ ಸೆಸ್ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, 2026ರ ಮಾರ್ಚ್ ವರೆಗೆ ಪರಿಹಾರ ಸೆಸ್ ಸಂಗ್ರಹಿಸಬಹುದಾಗಿದೆ. ಪಡೆದ ಸಾಲವನ್ನು ಮರು ಪಾವತಿಸಲು ಅದರ ಮೇಲಿನ ಬಡ್ಡಿಯನ್ನು 2026ರ ಜನವರಿ ಒಳಗೆ ಪಾವತಿಸಲು ಅನುಕೂಲವಾಗುವಂತೆ ಪರಿಹಾರ ಸೆಸ್ ಸಂಗ್ರಹಿಸಲಾಗುತ್ತಿದೆ ಎಂದರು.

2025ರ ಮಾರ್ಚ್ ವೇಳೆಗೆ 8 ಲಕ್ಷ 66 ಸಾವಿರದ 706 ಕೋಟಿ ರೂಪಾಯಿ ಪರಿಹಾರದ ಸೆಸ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ತಿಂಗಳ ಸೆಪ್ಟೆಂಬರ್ 5 ರವರೆಗೆ 6 ಲಕ್ಷ 64 ಸಾವಿರದ 203 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಸಮಗ್ರ ಸರಕು ಮತ್ತು ಸೇವಾ ತೆರಿಗೆ ವಿಸ್ತರಣೆ ಸೇರಿದಂತೆ ಜಿಎಸ್ ಟಿ ಮಂಡಳಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

9 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

9 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 day ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

2 days ago