Advertisement
ಸುದ್ದಿಗಳು

ಕ್ಯಾನ್ಸರ್ ಔಷಧಿಗಳ ಜಿಎಸ್ ಟಿ ದರ ಶೇ. 5ಕ್ಕೆ ಇಳಿಕೆ | ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಧಾರ |

Share

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇಕಡ 12ರಿಂದ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾನ್ಸರ್ ಔಷಧಿಗಳ ಬೆಲೆ ಇನ್ನಷ್ಟು ಅಗ್ಗವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅವರು ದೆಹಲಿಯಲ್ಲಿಂದು 54ನೇ ಸರಕು ಮತ್ತು ಸೇವಾ ತೆರಿಗೆ – ಜಿಎಸ್ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದರು. ಹಲವು ಲೋಹದ ಅನುಪಯುಕ್ತ ವಸ್ತುಗಳ ಜಿಎಸ್ ಟಿ ದರವನ್ನು 18 ರಿಂದ 12ಕ್ಕೆ ಇಳಿಸಲಾಗಿದೆ ಎಂದರು. ವೈದ್ಯಕೀಯ ಆರೋಗ್ಯ ವಿಮೆ ಮೇಲಿನ ಜಿಎಸ್ ಟಿ ಕಡಿತದ ಕುರಿತು ಸಚಿವರ ತಂಡ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದೇ ವೇಳೆ ಪರಿಹಾರ ಸೆಸ್ ನೀಡುವ ಸಂಬಂಧ ಮತ್ತೊಂದು ಸಚಿವರ ತಂಡ ರಚಿಸಲು ಮಂಡಳಿ ಸಮ್ಮತಿ ನೀಡಿದೆ. ಈ ತಂಡಗಳಿಗೆ ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಎರಡು ಸಚಿವರ ಗುಂಪಿನ ವರದಿಯನ್ನು ನವೆಂಬರ್ ನಲ್ಲಿ ನಡೆಯಲಿರುವ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಎಸ್ ಟಿ ದರ ತರ್ಕಬದ್ಧಗೊಳಿಸುವುದು ಹಾಗೂ ರಿಯಲ್ ಎಸ್ಟೇಟ್ ಕುರಿತಂತೆ ರಚಿಸಲಾಗಿದ್ದ ಸಚಿವರ ಗುಂಪು ತನ್ನ ಎರಡು ವರದಿಯನ್ನು ಸಲ್ಲಿಸಿದೆ. ಆನ್ ಲೈನ್ ಗೇಮಿಂಗ್, ಕ್ಯಾಸಿನೊಗಳ ಸ್ಥಿತಿಗತಿಗಳ ಕುರಿತು ಮಂಡಳಿ ಸಭೆಯಲ್ಲಿ ಪ್ರಸ್ತುತ ಪಡಿಸಲಾಗಿದೆ. ಆನ್ ಲೈನ್ ಗೇಮಿಂಗ್ ನಿಂದ ಬರುವ ಆದಾಯವು ಶೇಕಡ 412ರಷ್ಟು ಹೆಚ್ಚಾಗಿದೆ. ಕಳೆದ 6 ತಿಂಗಳಲ್ಲಿ 6 ಸಾವಿರದ 909 ಕೋಟಿ ರೂಪಾಯಿ ಇದರಿಂದ ಸಂಗ್ರಹವಾಗಿದೆ ಎಂದು ಹೇಳಿದರು. ಪರಿಹಾರ ಸೆಸ್ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, 2026ರ ಮಾರ್ಚ್ ವರೆಗೆ ಪರಿಹಾರ ಸೆಸ್ ಸಂಗ್ರಹಿಸಬಹುದಾಗಿದೆ. ಪಡೆದ ಸಾಲವನ್ನು ಮರು ಪಾವತಿಸಲು ಅದರ ಮೇಲಿನ ಬಡ್ಡಿಯನ್ನು 2026ರ ಜನವರಿ ಒಳಗೆ ಪಾವತಿಸಲು ಅನುಕೂಲವಾಗುವಂತೆ ಪರಿಹಾರ ಸೆಸ್ ಸಂಗ್ರಹಿಸಲಾಗುತ್ತಿದೆ ಎಂದರು.

2025ರ ಮಾರ್ಚ್ ವೇಳೆಗೆ 8 ಲಕ್ಷ 66 ಸಾವಿರದ 706 ಕೋಟಿ ರೂಪಾಯಿ ಪರಿಹಾರದ ಸೆಸ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ತಿಂಗಳ ಸೆಪ್ಟೆಂಬರ್ 5 ರವರೆಗೆ 6 ಲಕ್ಷ 64 ಸಾವಿರದ 203 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಸಮಗ್ರ ಸರಕು ಮತ್ತು ಸೇವಾ ತೆರಿಗೆ ವಿಸ್ತರಣೆ ಸೇರಿದಂತೆ ಜಿಎಸ್ ಟಿ ಮಂಡಳಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

4 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

9 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

9 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

10 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

10 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

10 hours ago