Advertisement
ಸುದ್ದಿಗಳು

ಕ್ಯಾನ್ಸರ್ ಔಷಧಿಗಳ ಜಿಎಸ್ ಟಿ ದರ ಶೇ. 5ಕ್ಕೆ ಇಳಿಕೆ | ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಧಾರ |

Share

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇಕಡ 12ರಿಂದ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾನ್ಸರ್ ಔಷಧಿಗಳ ಬೆಲೆ ಇನ್ನಷ್ಟು ಅಗ್ಗವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅವರು ದೆಹಲಿಯಲ್ಲಿಂದು 54ನೇ ಸರಕು ಮತ್ತು ಸೇವಾ ತೆರಿಗೆ – ಜಿಎಸ್ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದರು. ಹಲವು ಲೋಹದ ಅನುಪಯುಕ್ತ ವಸ್ತುಗಳ ಜಿಎಸ್ ಟಿ ದರವನ್ನು 18 ರಿಂದ 12ಕ್ಕೆ ಇಳಿಸಲಾಗಿದೆ ಎಂದರು. ವೈದ್ಯಕೀಯ ಆರೋಗ್ಯ ವಿಮೆ ಮೇಲಿನ ಜಿಎಸ್ ಟಿ ಕಡಿತದ ಕುರಿತು ಸಚಿವರ ತಂಡ ರಚನೆ ಮಾಡಲು ಉದ್ದೇಶಿಸಲಾಗಿದೆ. ಇದೇ ವೇಳೆ ಪರಿಹಾರ ಸೆಸ್ ನೀಡುವ ಸಂಬಂಧ ಮತ್ತೊಂದು ಸಚಿವರ ತಂಡ ರಚಿಸಲು ಮಂಡಳಿ ಸಮ್ಮತಿ ನೀಡಿದೆ. ಈ ತಂಡಗಳಿಗೆ ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಎರಡು ಸಚಿವರ ಗುಂಪಿನ ವರದಿಯನ್ನು ನವೆಂಬರ್ ನಲ್ಲಿ ನಡೆಯಲಿರುವ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಎಸ್ ಟಿ ದರ ತರ್ಕಬದ್ಧಗೊಳಿಸುವುದು ಹಾಗೂ ರಿಯಲ್ ಎಸ್ಟೇಟ್ ಕುರಿತಂತೆ ರಚಿಸಲಾಗಿದ್ದ ಸಚಿವರ ಗುಂಪು ತನ್ನ ಎರಡು ವರದಿಯನ್ನು ಸಲ್ಲಿಸಿದೆ. ಆನ್ ಲೈನ್ ಗೇಮಿಂಗ್, ಕ್ಯಾಸಿನೊಗಳ ಸ್ಥಿತಿಗತಿಗಳ ಕುರಿತು ಮಂಡಳಿ ಸಭೆಯಲ್ಲಿ ಪ್ರಸ್ತುತ ಪಡಿಸಲಾಗಿದೆ. ಆನ್ ಲೈನ್ ಗೇಮಿಂಗ್ ನಿಂದ ಬರುವ ಆದಾಯವು ಶೇಕಡ 412ರಷ್ಟು ಹೆಚ್ಚಾಗಿದೆ. ಕಳೆದ 6 ತಿಂಗಳಲ್ಲಿ 6 ಸಾವಿರದ 909 ಕೋಟಿ ರೂಪಾಯಿ ಇದರಿಂದ ಸಂಗ್ರಹವಾಗಿದೆ ಎಂದು ಹೇಳಿದರು. ಪರಿಹಾರ ಸೆಸ್ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, 2026ರ ಮಾರ್ಚ್ ವರೆಗೆ ಪರಿಹಾರ ಸೆಸ್ ಸಂಗ್ರಹಿಸಬಹುದಾಗಿದೆ. ಪಡೆದ ಸಾಲವನ್ನು ಮರು ಪಾವತಿಸಲು ಅದರ ಮೇಲಿನ ಬಡ್ಡಿಯನ್ನು 2026ರ ಜನವರಿ ಒಳಗೆ ಪಾವತಿಸಲು ಅನುಕೂಲವಾಗುವಂತೆ ಪರಿಹಾರ ಸೆಸ್ ಸಂಗ್ರಹಿಸಲಾಗುತ್ತಿದೆ ಎಂದರು.

2025ರ ಮಾರ್ಚ್ ವೇಳೆಗೆ 8 ಲಕ್ಷ 66 ಸಾವಿರದ 706 ಕೋಟಿ ರೂಪಾಯಿ ಪರಿಹಾರದ ಸೆಸ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ತಿಂಗಳ ಸೆಪ್ಟೆಂಬರ್ 5 ರವರೆಗೆ 6 ಲಕ್ಷ 64 ಸಾವಿರದ 203 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಸಮಗ್ರ ಸರಕು ಮತ್ತು ಸೇವಾ ತೆರಿಗೆ ವಿಸ್ತರಣೆ ಸೇರಿದಂತೆ ಜಿಎಸ್ ಟಿ ಮಂಡಳಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

5 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

6 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

6 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

10 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago