SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

April 24, 2026
7:30 AM
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ. 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗ ಪಡೆದಿದ್ದಾರೆ.

ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಉದ್ಯೋಗಾಭಿಮುಖ ಶಿಕ್ಷಣ ನೀಡುವ ಉದ್ದೇಶದಿಂದ ಮಂಗಳೂರಿನ GTTC (ಜಿ.ಟಿ.ಟಿ.ಸಿ) ಸಂಸ್ಥೆಯಲ್ಲಿ ಎ.ಐ.ಸಿ.ಟಿ.ಇ ಮಾನ್ಯತೆ ಪಡೆದ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳು ಆರಂಭವಾಗಿವೆ.

ಈ ಸಂಸ್ಥೆಯಲ್ಲಿ ಇದುವರೆಗೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡಿಪ್ಲೊಮಾ ಪೂರೈಸಿದ್ದು, ಬಹುತೇಕರು ಭಾರತದೆಲ್ಲೆಡೆ ಹಾಗೂ ದುಬೈ, ಓಮನ್, ಸೌದಿ ಅರೇಬಿಯಾ, ಕತಾರ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್, ಆಸ್ಟ್ರೇಲಿಯಾ, ಸಿಂಗಾಪುರ, ಜಪಾನ್, ಅಮೇರಿಕಾ ಮತ್ತು ಮಲೇಶಿಯಾ ಸೇರಿದಂತೆ ಅನೇಕ ವಿದೇಶಗಳಲ್ಲಿ ಪ್ರತಿಷ್ಠಿತ ಉದ್ಯಮಗಳಲ್ಲಿ ಉದ್ಯೋಗ ಪಡೆದಿದ್ದಾರೆ.

ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಪ್ರವೇಶಕ್ಕೆ ಅಗತ್ಯ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಆನ್‌ಲೈನ್ ಅಂಕಪಟ್ಟಿ
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು (2)
  • ಆಧಾರ್ ಕಾರ್ಡ್ ಜೆರಾಕ್ಸ್
  • ₹5,000 ಭದ್ರತಾ ಠೇವಣಿ

ಹೆಚ್ಚಿನ ಮಾಹಿತಿಗಾಗಿ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಜಿಟಿಟಿಸಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

GTTC Mangalore is offering AICTE-approved, 100% job-oriented diploma courses for SSLC pass students. With over 1500 graduates already placed in India and abroad, the institute provides strong technical training and career opportunities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror