Advertisement
ಸುದ್ದಿಗಳು

#Guarantee | ಶಾಲಾ ಚುನಾವಣೆಯಲ್ಲೂ ಗ್ಯಾರಂಟಿ ಎಫೆಕ್ಟ್ |ಮಕ್ಕಳ ಪ್ರಣಾಳಿಕೆಯಲ್ಲಿ ಉಚಿತ ಭಾಗ್ಯಗಳ ಘೋಷಣೆ

Share

ಯಥಾ ರಾಜ ತಥಾ ಪ್ರಜೇ ಅನ್ನ ಬೇಕೋ, ಅಥವಾ ಮಕ್ಕಳು ದೊಡ್ಡವರನ್ನು ನೋಡಿ ಕಲಿತಾರೆ ಅನ್ನಬೇಕೋ.. ಆದರೆ ಮಕ್ಕಳ ವಿಷಯಕ್ಕೆ ಬಂದರೆ ಇಂತಹ ವಿಷಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸುವುದು ಯಾಕೋ ಸರಿ ಅನ್ನಿಸುತ್ತಿಲ್ಲ. ರಾಜಕೀಯನೇ ಬೇರೆ ವಿದ್ಯಾಭ್ಯಾಸವೇ ಬೇರೆ. ಅದು ಒಂದಕ್ಕೊಂದು ಬೆರೆತರೆ ಮಕ್ಕಳು ಯಾವುದನ್ನು ಆದರ್ಶವಾಗಿ ತೆಗೆದುಕೊಳ್ಳಬಹುದು..?

ಈ ರೀತಿ ಕೈಯ್ಯಲ್ಲೊಂದು ಭಿತ್ತಿಪತ್ರ, ಅದರಲ್ಲಿ ವಿವಿಧ ಉಚಿತ ಭಾಗ್ಯ ಯೋಜನೆಗಳ ಘೋಷಣೆ. ಹೀಗೆ ಗ್ಯಾರಂಟಿಗಳ ಮೇಲೆ ಚುನಾವಣೆ ಗೆಲ್ಲಲು ಸಿದ್ಧರಾಗಿದ್ದಾರೆ ಈ ವಿದ್ಯಾರ್ಥಿ ಅಭ್ಯರ್ಥಿಗಳು #Candidate ಈ ಪ್ರಣಾಳಿಕೆ #Election Manifesto ಯಲ್ಲಿ ಏನೆಲ್ಲಾ ಭಾಗ್ಯಗಳನ್ನು ಘೋಷಿಸಿದ್ದಾರೆ..? ಯಾವ ಶಾಲೆಯ ಮಕ್ಕಳು ಇವರು..? ಹೇಳ್ತಿವಿ ಓದಿ

ಚುನಾವಣೆ ದಿನ ಘೋಷಣೆ ಆಗಿದೆ. ಮಕ್ಕಳು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ನೀಡಿದ ಉಚಿತ ಭಾಗ್ಯಗಳ ರೀತಿಯಲ್ಲೇ.. ಮತದಾರನ ಮನಸ್ಸು ಗೆಲ್ಲಲು ಬಗೆಬಗೆಯ ಉಚಿತ ಭಾಗ್ಯ ಘೋಷಣೆ ಮಾಡಿದ್ದಾರೆ ಈ ವಿದ್ಯಾರ್ಥಿಗಳು. ಇವ್ರೆಲ್ಲ ಮೈಸೂರಿನ ಸರಗೂರು ತಾಲೂಕಿನ ಎಂಸಿ ತಾಳಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು. ಶಾಲಾ ಸಂಸತ್ತಿನ ಮಂತ್ರಿ ಮಂಡಲಕ್ಕೆ ನಡೆಯಲಿರುವ ಚುನಾವಣೆಗೆ ಈ ಎಲ್ಲ ಕಸರತ್ತು ನಡೆಸುತ್ತಿದ್ದಾರೆ.

ಪ್ರಣಾಳಿಕೆಯಲ್ಲಿ ವಿವಿಧ ಉಚಿತ ಭರವಸೆ

ತಾವೇನಾದ್ರೂ ಗೆದ್ರೆ ಮಕ್ಕಳಿಗೆ ಪೆನ್ಸಿಲ್‌, ಪೆನ್ನು, ಪುಸ್ತಕ, ಎರೇಸರ್‌ ಹೀಗೆ ಉಚಿತ ಭಾಗ್ಯಗಳ ಘೋಷಣೆಯೇ ಮಾಡಿದ್ದಾರೆ. ಈ ಮೂಲಕ ಶಾಲಾ ಚುನಾವಣೆಯಲ್ಲೂ ಉಚಿತ ಗ್ಯಾರಂಟಿಗಳ ಪ್ರಣಾಳಿಕೆ ಹವಾ ಜೋರಾಗಿದೆ. ಹುಲಿ ಹಾಗೂ ನವಿಲು ಹೆಸರು ಮತ್ತು ಚಿಹ್ನೆಯಡಿ ಎರಡು ಪಕ್ಷಗಳನ್ನ ಸೃಷ್ಟಿ ಮಾಡಿಕೊಂಡು ಈ ಚುನಾವಣೆ ನಡೆಯಲಿದೆ. ಇದಕ್ಕಾಗಿ ಮಕ್ಕಳು ಭಾರೀ ಸಿದ್ಧತೆ ಮಾಡಿಕೊಂಡಿದ್ದಾರೆ. ಶಿಕ್ಷಕರ ಮುಂದೆ ಪ್ರಣಾಳಿಕೆ ಬಿಡುಗಡೆಗೊಳಿಸಿ ತಮಗೆ ವೋಟ್‌ ಹಾಕುವಂತೆ ಅಭ್ಯರ್ಥಿಗಳು ಮಕ್ಕಳಲ್ಲಿ ಮನವಿ ಮಾಡಿಕೊಂಡರು.

ಮಕ್ಕಳು ಈ ರೀತಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ನಡೆಸುತ್ತಿರುವುದು ಎಷ್ಟು ಸರಿ ಅನ್ನೋದೆ ಪ್ರಶ್ನೆ. ಮುಂದೆ ಮಕ್ಕಳೆಲ್ಲ ಉಚಿತ ಪೆನ್ನು, ಪೆನ್ಸಿಲ್, ಬೇಕು ಅಂದ್ರೆ ಎಲ್ಲಿಂದ ಕೊಡ್ತಾರೆ. ಇದಕ್ಕಾಗಿ ಗೆದ್ದ ಮಕ್ಕಳ ಹೆತ್ತವರು ದುಡ್ಡು ಕೊಡುತ್ತಾರಾ..? ಕೊಡದಿದ್ರೆ ಓಟು ಹಾಕಿದ ಮಕ್ಕಳು ಏನು ಮಾಡಬಹುದು..? ನಮ್ಮ ನಾಗರೀಕ ಸಮಾಜ ಮಾಡಿದಂತೆ ಪ್ರತಿಭಟನೆಗಳಂತ ಯೋಚನೆಗಳನ್ನು ಮಕ್ಕಳು ಮಾಡಿದ್ರೆ ಏನು ಗತಿ..? ಮಕ್ಕಳು ಶಾಲೆಗೆ ವಿದ್ಯಾರ್ಜನೆಗೆ ಹೋಗಬೇಕು. ಅದು ಬಿಟ್ಟು ಸಾಮಾಜಕ್ಕೆ ವಿರುದ್ಧ, ಅದು ಮಕ್ಕಳಿಗೆ ಸಂಬಂಧ ಪಡದ ವಿಷಯಗಳನ್ನು ಶಾಲೆಯಲ್ಲಿ ಮಾಡುತ್ತಿರುವುದು ಎಷ್ಟು ಸರಿ..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 hour ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

8 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

9 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

9 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

19 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

19 hours ago