#GruhalakshmiScheme  | ಗೃಹಿಣಿಯರ ಖಾತೆಗೆ ಹಣ “ಗ್ಯಾರಂಟಿ” | ಗೃಹಲಕ್ಷ್ಮಿ ಯೋಜನೆಗೆ ಚಾಲನೆ |

August 30, 2023
6:14 PM
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಚಾಲನೆ ಸಿಕ್ಕಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಚಾಲನೆ ನೀಡಿದ್ದರು. ಲಕ್ಷಾಂತರ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಚುನಾವಣೆ ವೇಳೆ‌ ಕಾಂಗ್ರೆಸ್ ನಾಯಕರು ಐದು ಗ್ಯಾರೆಂಟಿ ಭರವಸೆ ಕೊಟ್ಟಿದ್ದೆವು, ನಮಗೊಂದು ಬದ್ದತೆ ಇತ್ತು, ಕಾಂಗ್ರೆಸ್ ಕೊಟ್ಟ ಮಾತನ್ನ ಮಾಡಿ ತೋರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಟನ್ ಒತ್ತಿ ಕೋಟ್ಯಾಂತರ ಮಹಿಳೆಯರ ಖಾತೆಗೆ ಹಣಹಾಕಿದ್ದೇವೆ ಎಂದು ತಿಳಿಸಿದರು.

ಇದು ನಮ್ಮ ಮತ್ತು ಕರ್ನಾಟಕ ಸರ್ಕಾರದ ಭರವಸೆ. ನಾವು ಉಚಿತ ಪ್ರಯಾಣ ಬಗ್ಗೆ ಮತ್ತೊಂದು ಭರವಸೆ ಕೊಟ್ಟಿದ್ದೆವು, ಅದಕ್ಕೆ ಶಕ್ತಿ ಎಂಬ ಹೆಸರಿಟ್ಟು ಅದನ್ನ ಜಾರಿಗೊಳಿಸಿದ್ದೇವೆ.  1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮೆಯಾಗಲಿದ್ದು, ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಡಿಜಿಟಲ್​ ಕಾರ್ಡ್​ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರರು ಉಪಸ್ಥಿತರಿದ್ದರು.

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಗ್ಯಾರಂಟಿ ಜಾರಿ ಸಾಧ್ಯವಿಲ್ಲ ಎಂದು ವಿಪಕ್ಷಗಳ ನಾಯಕರು ಟೀಕಿಸಿದ್ದರು. ಪ್ರಧಾನಿ ಮೋದಿ ಸತ್ಯಕ್ಕೆ ದೂರವಾದ ಮಾತು ಹೇಳುತ್ತಿದ್ದಾರೆ. ಆದರೆ ಇಂದು ಮನೆ ಯಜಮಾನಿಗೆ 2 ಸಾವಿರ ರೂ. ಜಮೆ ಆಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ.ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಈಗಾಗಲೇ ಜಾರಿಯಾಗಿದ್ದು, ಗೃಹಲಕ್ಷ್ಮೀ ಗ್ಯಾರಂಟಿ ಇಂದು ಜಾರಿ ಮಾಡಿದ್ದೇವೆ. ಆ ಮೂಲಕ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ.ಶಕ್ತಿ ಯೋಜನೆಯಡಿ ಜೂನ್ 11ರಿಂದ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror