ಸುದ್ದಿಗಳು

#GruhalakshmiScheme  | ಗೃಹಿಣಿಯರ ಖಾತೆಗೆ ಹಣ “ಗ್ಯಾರಂಟಿ” | ಗೃಹಲಕ್ಷ್ಮಿ ಯೋಜನೆಗೆ ಚಾಲನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಚಾಲನೆ ನೀಡಿದ್ದರು. ಲಕ್ಷಾಂತರ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಚುನಾವಣೆ ವೇಳೆ‌ ಕಾಂಗ್ರೆಸ್ ನಾಯಕರು ಐದು ಗ್ಯಾರೆಂಟಿ ಭರವಸೆ ಕೊಟ್ಟಿದ್ದೆವು, ನಮಗೊಂದು ಬದ್ದತೆ ಇತ್ತು, ಕಾಂಗ್ರೆಸ್ ಕೊಟ್ಟ ಮಾತನ್ನ ಮಾಡಿ ತೋರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಟನ್ ಒತ್ತಿ ಕೋಟ್ಯಾಂತರ ಮಹಿಳೆಯರ ಖಾತೆಗೆ ಹಣಹಾಕಿದ್ದೇವೆ ಎಂದು ತಿಳಿಸಿದರು.

Advertisement
Advertisement

ಇದು ನಮ್ಮ ಮತ್ತು ಕರ್ನಾಟಕ ಸರ್ಕಾರದ ಭರವಸೆ. ನಾವು ಉಚಿತ ಪ್ರಯಾಣ ಬಗ್ಗೆ ಮತ್ತೊಂದು ಭರವಸೆ ಕೊಟ್ಟಿದ್ದೆವು, ಅದಕ್ಕೆ ಶಕ್ತಿ ಎಂಬ ಹೆಸರಿಟ್ಟು ಅದನ್ನ ಜಾರಿಗೊಳಿಸಿದ್ದೇವೆ.  1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮೆಯಾಗಲಿದ್ದು, ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಡಿಜಿಟಲ್​ ಕಾರ್ಡ್​ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರರು ಉಪಸ್ಥಿತರಿದ್ದರು.

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಗ್ಯಾರಂಟಿ ಜಾರಿ ಸಾಧ್ಯವಿಲ್ಲ ಎಂದು ವಿಪಕ್ಷಗಳ ನಾಯಕರು ಟೀಕಿಸಿದ್ದರು. ಪ್ರಧಾನಿ ಮೋದಿ ಸತ್ಯಕ್ಕೆ ದೂರವಾದ ಮಾತು ಹೇಳುತ್ತಿದ್ದಾರೆ. ಆದರೆ ಇಂದು ಮನೆ ಯಜಮಾನಿಗೆ 2 ಸಾವಿರ ರೂ. ಜಮೆ ಆಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ.ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಈಗಾಗಲೇ ಜಾರಿಯಾಗಿದ್ದು, ಗೃಹಲಕ್ಷ್ಮೀ ಗ್ಯಾರಂಟಿ ಇಂದು ಜಾರಿ ಮಾಡಿದ್ದೇವೆ. ಆ ಮೂಲಕ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ.ಶಕ್ತಿ ಯೋಜನೆಯಡಿ ಜೂನ್ 11ರಿಂದ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

13 minutes ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

45 minutes ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago