Advertisement
ಸುದ್ದಿಗಳು

#GruhalakshmiScheme  | ಗೃಹಿಣಿಯರ ಖಾತೆಗೆ ಹಣ “ಗ್ಯಾರಂಟಿ” | ಗೃಹಲಕ್ಷ್ಮಿ ಯೋಜನೆಗೆ ಚಾಲನೆ |

Share

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಚಾಲನೆ ನೀಡಿದ್ದರು. ಲಕ್ಷಾಂತರ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಚುನಾವಣೆ ವೇಳೆ‌ ಕಾಂಗ್ರೆಸ್ ನಾಯಕರು ಐದು ಗ್ಯಾರೆಂಟಿ ಭರವಸೆ ಕೊಟ್ಟಿದ್ದೆವು, ನಮಗೊಂದು ಬದ್ದತೆ ಇತ್ತು, ಕಾಂಗ್ರೆಸ್ ಕೊಟ್ಟ ಮಾತನ್ನ ಮಾಡಿ ತೋರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಟನ್ ಒತ್ತಿ ಕೋಟ್ಯಾಂತರ ಮಹಿಳೆಯರ ಖಾತೆಗೆ ಹಣಹಾಕಿದ್ದೇವೆ ಎಂದು ತಿಳಿಸಿದರು.

ಇದು ನಮ್ಮ ಮತ್ತು ಕರ್ನಾಟಕ ಸರ್ಕಾರದ ಭರವಸೆ. ನಾವು ಉಚಿತ ಪ್ರಯಾಣ ಬಗ್ಗೆ ಮತ್ತೊಂದು ಭರವಸೆ ಕೊಟ್ಟಿದ್ದೆವು, ಅದಕ್ಕೆ ಶಕ್ತಿ ಎಂಬ ಹೆಸರಿಟ್ಟು ಅದನ್ನ ಜಾರಿಗೊಳಿಸಿದ್ದೇವೆ.  1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮೆಯಾಗಲಿದ್ದು, ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಡಿಜಿಟಲ್​ ಕಾರ್ಡ್​ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರರು ಉಪಸ್ಥಿತರಿದ್ದರು.

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಗ್ಯಾರಂಟಿ ಜಾರಿ ಸಾಧ್ಯವಿಲ್ಲ ಎಂದು ವಿಪಕ್ಷಗಳ ನಾಯಕರು ಟೀಕಿಸಿದ್ದರು. ಪ್ರಧಾನಿ ಮೋದಿ ಸತ್ಯಕ್ಕೆ ದೂರವಾದ ಮಾತು ಹೇಳುತ್ತಿದ್ದಾರೆ. ಆದರೆ ಇಂದು ಮನೆ ಯಜಮಾನಿಗೆ 2 ಸಾವಿರ ರೂ. ಜಮೆ ಆಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ.ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಈಗಾಗಲೇ ಜಾರಿಯಾಗಿದ್ದು, ಗೃಹಲಕ್ಷ್ಮೀ ಗ್ಯಾರಂಟಿ ಇಂದು ಜಾರಿ ಮಾಡಿದ್ದೇವೆ. ಆ ಮೂಲಕ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ.ಶಕ್ತಿ ಯೋಜನೆಯಡಿ ಜೂನ್ 11ರಿಂದ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago