Advertisement
ಅನುಕ್ರಮ

ಚಿಲಿಪಿಲಿ | ಚೀಂವ್…. ಚೀಂವ್….. ಗುಬ್ಬಚ್ಚಿ

Share

ಮನೆ ,ಮನೆಯ ಸುತ್ತ ಹೂ ,ತರಕಾರಿಗಳ ಕೈ ತೋಟ. ಎದುರಿಗೆ  ಅಂಗಳ, ಮನೆಯ ಕಿಟಕಿ ಪಕ್ಕವೋ  ಅಟ್ಟದ ರೀಪಿನ ಸಂಧಿಯಲ್ಲೋ ಸಿಕ್ಕಿದ ಪುಟ್ಟ ಜಾಗದಲ್ಲಿ ಗುಬ್ಬಚ್ಚಿಯ ಎರಡೋ ಮೂರೋ  ಗೂಡು ಇದೆಯೆಂದರೆ ಮನೆ ಸಂಪೂರ್ಣವಾಯಿತೆಂದೇ ಅರ್ಥ. ಅಲ್ಲಿಂದ ಮುಂದೆ ಗದ್ದೆ  ಇದು  ನಮ್ಮ ಹಳ್ಳಿ ಮನೆಗಳ ಸಹಜ ಚಿತ್ರಣ.


ಹುಲ್ಲು ಕಡ್ಡಿ , ಹಕ್ಕಿಯ ಹಿಕ್ಕೆ ,ಸಣ್ಣ ಸಣ್ಣ ರೆಕ್ಕೆಗಳು ಅಲ್ಲಲ್ಲಿ ಬಿದ್ದುಕೊಂಡಿರುವುದು ಸಾಮಾನ್ಯ ದೃಶ್ಯ. ಗುಬ್ಬಚ್ಚಿ ಸಣ್ಣ ಹಕ್ಕಿ . ನಮ್ಮ ಮನಸಿಗೆ ಯಾಕೋ ಇದು ತುಂಬಾ ಹತ್ತಿರದ ಹಕ್ಕಿ ಎನಿಸುತ್ತದೆ.  ಆದರೀಗ ಯಾಕೋ ಅಪರೂಪ. ಬೇಕೆಂದ ಕೂಡಲೇ ನೋಡಲು ಸಿಗದು. ಗುಬ್ಬಚ್ಚಿಗಳ ಆಹಾರ ಮೂಲವಾದ ಗದ್ದೆಗಳು ಕಮ್ಮಿಯಾದದ್ದು,   ಹಕ್ಕಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾದುದರ ಕಾರಣವಿರಬಹುದು.

ಗುಬ್ಬಚ್ಚಿಯು ಜೋಡಿಯಾಗಿ ಇರುತ್ತವೆ. ಇದರ ವೈಜ್ಞಾನಿಕ ಹೆಸರು Passer domesticus. ಸರಾಸರಿ ಜೀವಿತಾವಧಿ 3 ವರ್ಷ. ಇದರ ವೇಗದ ಮಿತಿ ಗಂಟೆಗೆ 46 ಕಿಮೀ.  ಹಕ್ಕಿಯ ಉದ್ದ 14 ರಿಂದ 18 ಸೆ.ಮೀ. ಎತ್ತರ 16 ಸೆ.ಮೀ.  ಸಾಮಾನ್ಯವಾಗಿ ತೂಕ24  ರಿಂದ 40 ಗ್ರಾಂ.

ಅವುಗಳ ಬಣ್ಣ ಕಂದು.ಬೆನ್ನು ಮತ್ತು ಪಕ್ಕಗಳಲ್ಲಿ ಬಿಳಿ ಮತ್ತು ಕಪ್ಪು ಬಣ್ಣಗಳು ಮಿಶ್ರಿತವಾಗಿರುತ್ತದೆ.ಮುಂಭಾಗ ಬೆಳ್ಳಗಿರುತ್ತದೆ. ಗಂಡು ಗುಬ್ಬಿಗೆ ಗಂಟಲ ಮೇಲೆ ಕಪ್ಪು ಕಲೆ ಇರುತ್ತದೆ.  ಇವುಗಳ ಮೊಟ್ಟೆಗಳು ನಸು ಹಸಿರು ಮಿಶ್ರಿತ ಬಿಳಿ ಬಣ್ಣದ್ದಾಗಿರುತ್ತದೆ. ವಿಶ್ವದಲ್ಲಿ 26 ಜಾತಿಯ ಗುಬ್ಬಚ್ಚಿಗಳನ್ನು   ಗುರುತಿಸಲಾಗಿದೆ.  ನಮ್ಮ ದೇಶದಲ್ಲಿ 5ವಿಭಿನ್ನ   ಜಾತಿಯ ಗುಬ್ಬಿಗಳಿವೆ. ಇವುಗಳಲ್ಲಿ  ಮನೆಗುಬ್ಬಿ ಸರ್ವವ್ಯಾಪಿ.  ಧಾನ್ಯ, ಹುಳು ಹುಪ್ಪಟೆಗಳು ಇವುಗಳ ಮುಖ್ಯ ಆಹಾರ.
ಗುಬ್ಬಿಗಳಿಗೆ ಧೂಳು ಸ್ನಾನವೆಂದರೆ  ಬಹಳ ಪ್ರೀತಿ. ಗುಬ್ಬಿಗಳು ಅಗತ್ಯ ಬಿದ್ದರೆ  ನೀರಿನ ಮೇಲೆ ಈಜ ಬಲ್ಲುದು. ಈ ಹಕ್ಕಿ ತನ್ನ ವಾಸ್ತವ್ಯ ಪ್ರದೇಶದಿಂದ  ಹೆಚ್ಚೆಂದರೆ 2 ಕಿ.ಮೀ  ಸಂಚರಿಸುತ್ತವೆ. ಗುಬ್ಬಚ್ಚಿ ವಲಸೆ ಹಕ್ಕಿಯಲ್ಲ.

2012 ನೇ ಇಸವಿಯಲ್ಲಿ  ದೆಹಲಿಯ ರಾಜ್ಯ ಪಕ್ಷಿಯೆಂದು ಗುಬ್ಬಚ್ಚಿಯನ್ನು ಘೋಷಿಸಲಾಗಿದೆ.  ಮಾರ್ಚ್ 20 ರಂದು ವಿಶ್ವ ಗುಬ್ಬಚ್ಚಿ ದಿನವೆಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

41 minutes ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago