Advertisement
ಅನುಕ್ರಮ

ಚಿಲಿಪಿಲಿ | ಚೀಂವ್…. ಚೀಂವ್….. ಗುಬ್ಬಚ್ಚಿ

Share

ಮನೆ ,ಮನೆಯ ಸುತ್ತ ಹೂ ,ತರಕಾರಿಗಳ ಕೈ ತೋಟ. ಎದುರಿಗೆ  ಅಂಗಳ, ಮನೆಯ ಕಿಟಕಿ ಪಕ್ಕವೋ  ಅಟ್ಟದ ರೀಪಿನ ಸಂಧಿಯಲ್ಲೋ ಸಿಕ್ಕಿದ ಪುಟ್ಟ ಜಾಗದಲ್ಲಿ ಗುಬ್ಬಚ್ಚಿಯ ಎರಡೋ ಮೂರೋ  ಗೂಡು ಇದೆಯೆಂದರೆ ಮನೆ ಸಂಪೂರ್ಣವಾಯಿತೆಂದೇ ಅರ್ಥ. ಅಲ್ಲಿಂದ ಮುಂದೆ ಗದ್ದೆ  ಇದು  ನಮ್ಮ ಹಳ್ಳಿ ಮನೆಗಳ ಸಹಜ ಚಿತ್ರಣ.


ಹುಲ್ಲು ಕಡ್ಡಿ , ಹಕ್ಕಿಯ ಹಿಕ್ಕೆ ,ಸಣ್ಣ ಸಣ್ಣ ರೆಕ್ಕೆಗಳು ಅಲ್ಲಲ್ಲಿ ಬಿದ್ದುಕೊಂಡಿರುವುದು ಸಾಮಾನ್ಯ ದೃಶ್ಯ. ಗುಬ್ಬಚ್ಚಿ ಸಣ್ಣ ಹಕ್ಕಿ . ನಮ್ಮ ಮನಸಿಗೆ ಯಾಕೋ ಇದು ತುಂಬಾ ಹತ್ತಿರದ ಹಕ್ಕಿ ಎನಿಸುತ್ತದೆ.  ಆದರೀಗ ಯಾಕೋ ಅಪರೂಪ. ಬೇಕೆಂದ ಕೂಡಲೇ ನೋಡಲು ಸಿಗದು. ಗುಬ್ಬಚ್ಚಿಗಳ ಆಹಾರ ಮೂಲವಾದ ಗದ್ದೆಗಳು ಕಮ್ಮಿಯಾದದ್ದು,   ಹಕ್ಕಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾದುದರ ಕಾರಣವಿರಬಹುದು.

ಗುಬ್ಬಚ್ಚಿಯು ಜೋಡಿಯಾಗಿ ಇರುತ್ತವೆ. ಇದರ ವೈಜ್ಞಾನಿಕ ಹೆಸರು Passer domesticus. ಸರಾಸರಿ ಜೀವಿತಾವಧಿ 3 ವರ್ಷ. ಇದರ ವೇಗದ ಮಿತಿ ಗಂಟೆಗೆ 46 ಕಿಮೀ.  ಹಕ್ಕಿಯ ಉದ್ದ 14 ರಿಂದ 18 ಸೆ.ಮೀ. ಎತ್ತರ 16 ಸೆ.ಮೀ.  ಸಾಮಾನ್ಯವಾಗಿ ತೂಕ24  ರಿಂದ 40 ಗ್ರಾಂ.

ಅವುಗಳ ಬಣ್ಣ ಕಂದು.ಬೆನ್ನು ಮತ್ತು ಪಕ್ಕಗಳಲ್ಲಿ ಬಿಳಿ ಮತ್ತು ಕಪ್ಪು ಬಣ್ಣಗಳು ಮಿಶ್ರಿತವಾಗಿರುತ್ತದೆ.ಮುಂಭಾಗ ಬೆಳ್ಳಗಿರುತ್ತದೆ. ಗಂಡು ಗುಬ್ಬಿಗೆ ಗಂಟಲ ಮೇಲೆ ಕಪ್ಪು ಕಲೆ ಇರುತ್ತದೆ.  ಇವುಗಳ ಮೊಟ್ಟೆಗಳು ನಸು ಹಸಿರು ಮಿಶ್ರಿತ ಬಿಳಿ ಬಣ್ಣದ್ದಾಗಿರುತ್ತದೆ. ವಿಶ್ವದಲ್ಲಿ 26 ಜಾತಿಯ ಗುಬ್ಬಚ್ಚಿಗಳನ್ನು   ಗುರುತಿಸಲಾಗಿದೆ.  ನಮ್ಮ ದೇಶದಲ್ಲಿ 5ವಿಭಿನ್ನ   ಜಾತಿಯ ಗುಬ್ಬಿಗಳಿವೆ. ಇವುಗಳಲ್ಲಿ  ಮನೆಗುಬ್ಬಿ ಸರ್ವವ್ಯಾಪಿ.  ಧಾನ್ಯ, ಹುಳು ಹುಪ್ಪಟೆಗಳು ಇವುಗಳ ಮುಖ್ಯ ಆಹಾರ.
ಗುಬ್ಬಿಗಳಿಗೆ ಧೂಳು ಸ್ನಾನವೆಂದರೆ  ಬಹಳ ಪ್ರೀತಿ. ಗುಬ್ಬಿಗಳು ಅಗತ್ಯ ಬಿದ್ದರೆ  ನೀರಿನ ಮೇಲೆ ಈಜ ಬಲ್ಲುದು. ಈ ಹಕ್ಕಿ ತನ್ನ ವಾಸ್ತವ್ಯ ಪ್ರದೇಶದಿಂದ  ಹೆಚ್ಚೆಂದರೆ 2 ಕಿ.ಮೀ  ಸಂಚರಿಸುತ್ತವೆ. ಗುಬ್ಬಚ್ಚಿ ವಲಸೆ ಹಕ್ಕಿಯಲ್ಲ.

2012 ನೇ ಇಸವಿಯಲ್ಲಿ  ದೆಹಲಿಯ ರಾಜ್ಯ ಪಕ್ಷಿಯೆಂದು ಗುಬ್ಬಚ್ಚಿಯನ್ನು ಘೋಷಿಸಲಾಗಿದೆ.  ಮಾರ್ಚ್ 20 ರಂದು ವಿಶ್ವ ಗುಬ್ಬಚ್ಚಿ ದಿನವೆಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

36 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

9 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago