ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

October 31, 2022
7:18 PM

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

Advertisement
Advertisement
Advertisement

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

Advertisement

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror