ಸುದ್ದಿಗಳು

ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

Advertisement

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

1 hour ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

21 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago